Featured

ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ: ಸಿದ್ದರಾಮಯ್ಯ – vishwanews24

ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ: ಸಿದ್ದರಾಮಯ್ಯ

ಮೋದಿ ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಅವರಿಗೆ ಬಹುಮತ ಬರಲಿಲ್ಲ. ಎನ್‍ಡಿಎ ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಅವರು ನುಡಿದರು.

ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಮತ ಯಾಚನೆ ಮಾಡಿದರು. ಆದರೆ, ರಾಮ ಮಂದಿರ ನಿರ್ಮಾಣವಾಗಿರುವ ಅಯೋಧ್ಯೆಯಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಇದು ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಹೇಳಿದರು.

ರಾಹುಲ್ ಗಾಂಧಿ ನಡೆಸಿದಂತಹ ಭಾರತ್ ಜೋಡೋ ಯಾತ್ರೆ, ನ್ಯಾಯ ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿ ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿ ಕೈ ಹಿಡಿದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

17 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

17 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

17 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

19 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago