ಮೋದಿ ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಅವರಿಗೆ ಬಹುಮತ ಬರಲಿಲ್ಲ. ಎನ್ಡಿಎ ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಅವರು ನುಡಿದರು.
ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಮತ ಯಾಚನೆ ಮಾಡಿದರು. ಆದರೆ, ರಾಮ ಮಂದಿರ ನಿರ್ಮಾಣವಾಗಿರುವ ಅಯೋಧ್ಯೆಯಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಇದು ಬಿಜೆಪಿಯ ಸೋಲು ಎಂದು ಸಿದ್ದರಾಮಯ್ಯ ಹೇಳಿದರು.
ರಾಹುಲ್ ಗಾಂಧಿ ನಡೆಸಿದಂತಹ ಭಾರತ್ ಜೋಡೋ ಯಾತ್ರೆ, ನ್ಯಾಯ ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿ ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿ ಕೈ ಹಿಡಿದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…