ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ.
ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ( ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ರಾಹುಲ್ ಗಾಂಧಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರೋದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಸಿರ್ಸಿ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವ್ಯಾಪಕ ಸ್ವರೂಪ ಪಡೆಯುತ್ತಿದ್ದಂತೇ, ಪೊಲೀಸರು ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಬಂಧಿಸಿದರು.
ಈ ಪ್ರತಿಭಟನೆಯ ವೇಳೆ ಮಾತನಾಡಿದಂತ ಶಾಸಕ ಜಮೀರ್ ಅಹ್ಮದ್ ಖಾನ್, ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿಯವರು ಚಿತ್ರಹಿಂಸೆ ನೀಡುತ್ತಿದ್ದಾರೆ. 2002ರಲ್ಲಿಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಆದ್ರೇ ಇದೇ ಪ್ರಕರಣವನ್ನು ರೀ ಓಪನ್ ಮಾಡಿ, ಬೇಕಂತಲೇ ವಿಚಾರಣೆ ನಡೆಸುತ್ತಿದೆ ಎಂದು ಕಿಡಿಕಾರಿದರು.
ಇಡಿ ಸತತ ಐದು ದಿನಗಳಿಂದ ನಮ್ಮ ನಾಯಕರನ್ನು ಬೇಕೆಂದೇ ವಿಚಾರಣೆ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸೋದಕ್ಕೆ ಇಷ್ಟು ದಿನ ಬೇಕಾ.? ಇದು ಉದ್ದೇಶ ಪೂರಿತ ಹುನ್ನಾರವಾಗಿದೆ. ಮುಂಬರುವ ಚುನಾವಣೆಯ ದೃಷ್ಠಿಯಿಂದ ಹೀಗೆ ಇಡಿ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದರು.
ದೇಶಾದ್ಯಂತ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ರಾಹುಲ್ ಗಾಂಧಿಯವರಿಗೆ ಎಲ್ಲಿಯವರೆಗೆ ಕಿರುಕುಳ ನೀಡೋದು ನಿಲ್ಲಿಸೋದಿಲ್ಲವೇ ನಮ್ಮ ಹೋರಾಟಾ ಕೂಡ ನಿಲ್ಲೋದಿಲ್ಲ ಎಂಬುದಾಗಿ ತಿಳಿಸಿದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…