Featured

ರಾಹುಲ್ ಗಾಂಧಿಯವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಯತ್ನ: ಸಿಎಂ – vishwanews24

ರಾಹುಲ್ ಗಾಂಧಿಯವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಯತ್ನ: ಸಿಎಂ

ಬೆಂಗಳೂರು: ಬಿಜೆಪಿ ನಾಯಕರು ಮತ್ತು ಬಿಜೆಪಿಗೆ ಬೆಂಬಲ ಕೊಟ್ಟಿರುವ ಪಕ್ಷದ ನಾಯಕರು ರಾಹುಲ್ ಗಾಂಧ ವಿರುದ್ಧ ಜೀವ ಬೆದರಿಕೆ ಹಾಕುತ್ತಿದ್ದು ಕೂಡಲೇ ಎಲ್ಲರನ್ನು ಬಂಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಇತ್ತೀಚೆಗೆ ರಾಹುಲ್ ಗಾಂಧಿ ಮೇಲೆ ಬಿಜೆಪಿಯವರು ಗಧಾಪ್ರಹಾರ ನಡೆಸುತ್ತಿದ್ದಾರೆ. ಟೀಕೆಗಳನ್ನು ಮಾತ್ರ ಮಾಡುತ್ತಿಲ್ಲ. ಸುಳ್ಳು ಆರೋಪ ಮಾತ್ರ ಮಾಡುತ್ತಿಲ್ಲ. ಅವರಿಗೆ ಕೊಲೆ ಬೆದರಿಕೆ ಆರೋಪ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಜನಪ್ರಿಯತೆ ಕುಗ್ಗಿಸಲು, ಅವರನ್ನ ಹಣಿಯಲು ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ, ಗೊಡ್ಡು ಬೆದರಿಕೆಗಳಿಗೆ, ಕೊಲೆ ಬೆದರಿಕೆಗೆ ರಾಹುಲ್ ಗಾಂಧಿ ಹೆದರುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಇಂದಿರಾಗಾಂಧಿ ಕುಟುಂಬದಿಂದ ಬಂದವರು. ದೇಶಕ್ಕಾಗಿ ಪ್ರಾಣ ತೆತ್ತವರು. ಅವರ ತಂದೆ ಕೂಡಾ ಬಾಂಬ್ ಸ್ಫೋಟದಲ್ಲಿ ಜೀವ ಕಳೆದುಕೊಂಡವರು. ಬಿಜೆಪಿ ನಾಯಕರು ಇತ್ತೀಚೆಗೆ ತಾರ್ವಿಂದರ್ ಸಿಂಗ್ ಮಾರ್ವ, ನೇರವಾಗಿ ರಾಹುಲ್ ಗಾಂಧಿಗೆ ನೀವು ಸರಿಯಾಗಿ ನಡೆದುಕೊಳ್ಳದೇ ಇದ್ದರೆ ಇಂದಿರಾಗಾಂಧಿಗೆ ಆದ ಗತಿಯೇ ನಿಮಗೂ ಆಗುತ್ತೆ ಎಂದು ಬೆದರಿಕೆ ಹಾಕಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರು ರವನೀತ್ ಬಿಟ್ಟು ಅವರು ರಾಹುಲ್ ಅವರಿಗೆ ನೀವು ಒಬ್ಬ ಭಯೋತ್ಪಾದಕ ಎಂದು ಕರೆದಿದ್ದಾರೆ. ಇದರ ಅರ್ಥ ಸಾರ್ವಜನಿಕರನ್ನ ಎತ್ತಿ ಕಟ್ಟೋದು. ಇಂತಹ ಪ್ರಚೋದನೆ ಮಾತು ಆಡಿ ರಾಹುಲ್ ವಿರುದ್ಧ ಜನರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

22 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

22 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

23 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

23 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago