Featured

ರಾಹುಲ್ ಗಾಂಧಿಯವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಯತ್ನ: ಸಿಎಂ – vishwanews24

ರಾಹುಲ್ ಗಾಂಧಿಯವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಯತ್ನ: ಸಿಎಂ

ಬೆಂಗಳೂರು: ಬಿಜೆಪಿ ನಾಯಕರು ಮತ್ತು ಬಿಜೆಪಿಗೆ ಬೆಂಬಲ ಕೊಟ್ಟಿರುವ ಪಕ್ಷದ ನಾಯಕರು ರಾಹುಲ್ ಗಾಂಧ ವಿರುದ್ಧ ಜೀವ ಬೆದರಿಕೆ ಹಾಕುತ್ತಿದ್ದು ಕೂಡಲೇ ಎಲ್ಲರನ್ನು ಬಂಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಇತ್ತೀಚೆಗೆ ರಾಹುಲ್ ಗಾಂಧಿ ಮೇಲೆ ಬಿಜೆಪಿಯವರು ಗಧಾಪ್ರಹಾರ ನಡೆಸುತ್ತಿದ್ದಾರೆ. ಟೀಕೆಗಳನ್ನು ಮಾತ್ರ ಮಾಡುತ್ತಿಲ್ಲ. ಸುಳ್ಳು ಆರೋಪ ಮಾತ್ರ ಮಾಡುತ್ತಿಲ್ಲ. ಅವರಿಗೆ ಕೊಲೆ ಬೆದರಿಕೆ ಆರೋಪ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಜನಪ್ರಿಯತೆ ಕುಗ್ಗಿಸಲು, ಅವರನ್ನ ಹಣಿಯಲು ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ, ಗೊಡ್ಡು ಬೆದರಿಕೆಗಳಿಗೆ, ಕೊಲೆ ಬೆದರಿಕೆಗೆ ರಾಹುಲ್ ಗಾಂಧಿ ಹೆದರುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಇಂದಿರಾಗಾಂಧಿ ಕುಟುಂಬದಿಂದ ಬಂದವರು. ದೇಶಕ್ಕಾಗಿ ಪ್ರಾಣ ತೆತ್ತವರು. ಅವರ ತಂದೆ ಕೂಡಾ ಬಾಂಬ್ ಸ್ಫೋಟದಲ್ಲಿ ಜೀವ ಕಳೆದುಕೊಂಡವರು. ಬಿಜೆಪಿ ನಾಯಕರು ಇತ್ತೀಚೆಗೆ ತಾರ್ವಿಂದರ್ ಸಿಂಗ್ ಮಾರ್ವ, ನೇರವಾಗಿ ರಾಹುಲ್ ಗಾಂಧಿಗೆ ನೀವು ಸರಿಯಾಗಿ ನಡೆದುಕೊಳ್ಳದೇ ಇದ್ದರೆ ಇಂದಿರಾಗಾಂಧಿಗೆ ಆದ ಗತಿಯೇ ನಿಮಗೂ ಆಗುತ್ತೆ ಎಂದು ಬೆದರಿಕೆ ಹಾಕಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರು ರವನೀತ್ ಬಿಟ್ಟು ಅವರು ರಾಹುಲ್ ಅವರಿಗೆ ನೀವು ಒಬ್ಬ ಭಯೋತ್ಪಾದಕ ಎಂದು ಕರೆದಿದ್ದಾರೆ. ಇದರ ಅರ್ಥ ಸಾರ್ವಜನಿಕರನ್ನ ಎತ್ತಿ ಕಟ್ಟೋದು. ಇಂತಹ ಪ್ರಚೋದನೆ ಮಾತು ಆಡಿ ರಾಹುಲ್ ವಿರುದ್ಧ ಜನರನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

 

Vishwa News 24

Recent Posts

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

5 minutes ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

9 minutes ago

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

25 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

47 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

21 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago