ನವದೆಹಲಿ: ಮೊನ್ನೆಯಷ್ಟೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್ ಗಾಂಧಿಯನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ್ದ ಕಾಂಗ್ರೆಸ್ ಇದೀಗ ವರಸೆ ಬದಲಿಸಿದೆ.
ರಾಹುಲ್ ಪ್ರಧಾನಿ ಅಭ್ಯರ್ಥಿಯಾದರೆ ಬಿಎಸ್ ಪಿ, ತೃಣಮೂಲ ಕಾಂಗ್ರೆಸ್ ಬೆಂಬಲ ಕಷ್ಟ ಎಂದು ಅರಿತ ಕಾಂಗ್ರೆಸ್ ಇದೀಗ ಆರ್ ಎಸ್ ಎಸ್ ಮತ್ತು ಬಿಜೆಪಿ ಸೋಲಿಸುವ ಸಾಮರ್ಥ್ಯವಿರುವ ಯಾರಿಗೇ ಆದರೂ ತನ್ನ ಬೆಂಬಲವಿದೆ ಎಂದು ಹೇಳಿಕೊಂಡಿದೆ.
ಸ್ವತಃ ರಾಹುಲ್ ಗಾಂಧಿ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ಮಹಿಳಾ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ರಾಹುಲ್ ಈ ರೀತಿ ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೆ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಸೀಟು ಗೆಲ್ಲುವುದು ನಮ್ಮ ಗುರಿ ಎಂದಿದ್ದಾರೆ. ಈ ಎರಡು ರಾಜ್ಯಗಳಲ್ಲಿ ಮಿತ್ರ ಪಕ್ಷಗಳೊಂದಿಗೆ ಸಖ್ಯ ಬೆಳೆಸಲು ಸಿದ್ಧರಾಗಿರುವುದಾಗಿ ಅವರು ಹೇಳಿದ್ದಾರೆ. ಈ ಎರಡು ರಾಜ್ಯಗಳು ಅತೀ ಹೆಚ್ಚು ಲೋಕಸಭೆ ಸ್ಥಾನಗಳನ್ನು ಹೊಂದಿವೆ.
ಹೀಗಾಗಿ ಇದೀಗ ಪ್ರಧಾನಿ ಹುದ್ದೆ ರೇಸ್ ನಲ್ಲಿ ಮಾಯಾವತಿ ಮತ್ತು ಮಮತಾ ಬ್ಯಾನರ್ಜಿ ಹೆಸರುಗಳು ಮುಂಚೂಣಿಗೆ ಬಂದಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…