Featured

ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿ : ಯಶ್ಪಾಲ್ ಸುವರ್ಣ – Vishwanews24

ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿ : ಯಶ್ಪಾಲ್ ಸುವರ್ಣ

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮೋದಿ ಉಪನಾಮ ಇರುವವರೆಲ್ಲ ಕಳ್ಳರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯ 2 ವರ್ಷಗಳ ಶಿಕ್ಷೆ ವಿಧಿಸುವ ಮೂಲಕ ರಾಹುಲ್ ಗಾಂಧಿಯ ಅಪ್ರಬುದ್ಧ ಬಾಲಿಶ ಹೇಳಿಕೆ ಮತ್ತು ಹಿಂದುಳಿದ ವರ್ಗಗಳ ನಾಯಕರನ್ನು ತೆಗಳುವ ನಿಲುವಿಗೆ ತಕ್ಕ ಶಾಸ್ತಿ ಮಾಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಕಳೆದ 65 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಮತ್ತು ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ಬರಲು ಅವಕಾಶ ನೀಡದೆ ನಿರಂತರವಾಗಿ ಸುಳ್ಳು ಭರವಸೆಗಳನ್ನು ನೀಡಿ ಓಟ್ ಬ್ಯಾಂಕ್ ರಾಜಕಾರಣ ನಡೆಸುತ್ತಿದೆ.

ಇದೀಗ ಹಿಂದುಳಿದ ವರ್ಗ ಮತ್ತು ದಲಿತರು ನರೇಂದ್ರ ಮೋದಿಯವರ ನಾಯಕತ್ವಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದರಿಂದ ಹತಾಶೆಗೊಂಡ ಕಾಂಗ್ರೆಸ್ ಪ್ರಧಾನಿ ಮೋದಿ ಸಹಿತ ಹಿಂದುಳಿದ ವರ್ಗದವರನ್ನು ಕಳ್ಳನಿಗೆ ಹೋಲಿಕೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಬಗ್ಗೆ ರಾಹುಲ್ ತನಗಿರುವ ಧೋರಣೆಯನ್ನು ಪ್ರದರ್ಶಿಸಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿಯಾಗಿದ್ದು, ಹತಾಶ ಸ್ಥಿತಿಯಲ್ಲಿ ದೇಶದಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನತೆ ಮತ್ತೊಮ್ಮೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago