Featured

ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿ : ಯಶ್ಪಾಲ್ ಸುವರ್ಣ – Vishwanews24

ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿ : ಯಶ್ಪಾಲ್ ಸುವರ್ಣ

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮೋದಿ ಉಪನಾಮ ಇರುವವರೆಲ್ಲ ಕಳ್ಳರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯ 2 ವರ್ಷಗಳ ಶಿಕ್ಷೆ ವಿಧಿಸುವ ಮೂಲಕ ರಾಹುಲ್ ಗಾಂಧಿಯ ಅಪ್ರಬುದ್ಧ ಬಾಲಿಶ ಹೇಳಿಕೆ ಮತ್ತು ಹಿಂದುಳಿದ ವರ್ಗಗಳ ನಾಯಕರನ್ನು ತೆಗಳುವ ನಿಲುವಿಗೆ ತಕ್ಕ ಶಾಸ್ತಿ ಮಾಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಕಳೆದ 65 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಮತ್ತು ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ಬರಲು ಅವಕಾಶ ನೀಡದೆ ನಿರಂತರವಾಗಿ ಸುಳ್ಳು ಭರವಸೆಗಳನ್ನು ನೀಡಿ ಓಟ್ ಬ್ಯಾಂಕ್ ರಾಜಕಾರಣ ನಡೆಸುತ್ತಿದೆ.

ಇದೀಗ ಹಿಂದುಳಿದ ವರ್ಗ ಮತ್ತು ದಲಿತರು ನರೇಂದ್ರ ಮೋದಿಯವರ ನಾಯಕತ್ವಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದರಿಂದ ಹತಾಶೆಗೊಂಡ ಕಾಂಗ್ರೆಸ್ ಪ್ರಧಾನಿ ಮೋದಿ ಸಹಿತ ಹಿಂದುಳಿದ ವರ್ಗದವರನ್ನು ಕಳ್ಳನಿಗೆ ಹೋಲಿಕೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಬಗ್ಗೆ ರಾಹುಲ್ ತನಗಿರುವ ಧೋರಣೆಯನ್ನು ಪ್ರದರ್ಶಿಸಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿಯಾಗಿದ್ದು, ಹತಾಶ ಸ್ಥಿತಿಯಲ್ಲಿ ದೇಶದಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನತೆ ಮತ್ತೊಮ್ಮೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago