ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರು ಕೇವಲ ಉತ್ತರ ಭಾರತದಿಂದ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ ಅದರಲ್ಲೂ ಕರ್ನಾಟಕದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಆಹ್ವಾನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಳೆದ 5 ವರ್ಷಗಳ ಸಾಧನೆ ಶೂನ್ಯವಾಗಿದೆ. ಪ್ರಧಾನಿಗಳು ಕೇವಲ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಕಪ್ಪು ಹಣ ತರುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವಂತಿಲ್ಲ. ಏಕೆಂದರೇ ಪ್ರಶ್ನೆ ಮಾಡಿದರೆ ದೇಶ ದ್ರೋಹಿಗಳು ಎಂದು ಹೇಳುತ್ತಿದ್ದಾರೆ.
ನೀವು ಕರ್ನಾಟಕದಿಂದ ಸ್ಪರ್ಧಿಸುವುದನ್ನು ನಾವು ಸ್ವಾಗತಿಸಲಿದ್ದೇವೆ. ಇದು ದಕ್ಷಿಣ ಭಾರತದಲ್ಲೇ ಕಾಂಗ್ರೆಸ್ ಗೆ ಸ್ಪೂರ್ತಿ ತಂದುಕೊಡಲಿದೆ. ಕಾಂಗ್ರೆಸ್ ಕಷ್ಟದಲ್ಲಿದ್ದಾಗಲೆಲ್ಲಾ ಕರ್ನಾಟಕ ನೆರವು ನೀಡಿದೆ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಕೂಡ ರಾಜ್ಯದಿಂದ ಸ್ಪರ್ಧಿಸಿದ್ದರು ಎಂದು ಪತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…