ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರು ಕೇವಲ ಉತ್ತರ ಭಾರತದಿಂದ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ ಅದರಲ್ಲೂ ಕರ್ನಾಟಕದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಆಹ್ವಾನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಳೆದ 5 ವರ್ಷಗಳ ಸಾಧನೆ ಶೂನ್ಯವಾಗಿದೆ. ಪ್ರಧಾನಿಗಳು ಕೇವಲ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಕಪ್ಪು ಹಣ ತರುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವಂತಿಲ್ಲ. ಏಕೆಂದರೇ ಪ್ರಶ್ನೆ ಮಾಡಿದರೆ ದೇಶ ದ್ರೋಹಿಗಳು ಎಂದು ಹೇಳುತ್ತಿದ್ದಾರೆ.
ನೀವು ಕರ್ನಾಟಕದಿಂದ ಸ್ಪರ್ಧಿಸುವುದನ್ನು ನಾವು ಸ್ವಾಗತಿಸಲಿದ್ದೇವೆ. ಇದು ದಕ್ಷಿಣ ಭಾರತದಲ್ಲೇ ಕಾಂಗ್ರೆಸ್ ಗೆ ಸ್ಪೂರ್ತಿ ತಂದುಕೊಡಲಿದೆ. ಕಾಂಗ್ರೆಸ್ ಕಷ್ಟದಲ್ಲಿದ್ದಾಗಲೆಲ್ಲಾ ಕರ್ನಾಟಕ ನೆರವು ನೀಡಿದೆ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಕೂಡ ರಾಜ್ಯದಿಂದ ಸ್ಪರ್ಧಿಸಿದ್ದರು ಎಂದು ಪತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…