ಬೆಂಗಳೂರು: ‘ಜೈಲಿಗೆ ಹಾಕ್ತಾರಾ ಹಾಕಲಿ, ತೊಂದರೆ ಕೊಡ್ತಾರಾ ಕೊಡಲಿ’. ಇದು ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇ.ಡಿ ವಿಚಾರಣೆ ನಡೆಸುತ್ತಿರುವುದು ಹಾಗೂ ದೆಹಲಿ ಪೊಲೀಸರ ವರ್ತನೆಯನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ರಾಜಭವನ ಚಲೋ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಸುಳ್ಳು ಕೇಸ್ ಹಾಕಿ ಬೆದರಿಸುವ ಯತ್ನ ಇದಾಗಿದೆ. ಅವರು ಜೈಲಿಗೆ ಹಾಕುತ್ತಾರಾ ಹಾಕಲಿ, ತೊಂದರೆ ಕೊಡುತ್ತಿದ್ದಾರಾ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೆ ಕೇಸ್ ಹಾಕಲ್ಲ ಎಂದು ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್, ವಿಪಕ್ಷಗಳ ವಿರುದ್ಧ ಆಡಳಿತ ಪಕ್ಷ ಬಿಜೆಪಿ ದ್ವೇಷ ಸಾಧಿಸುತ್ತಿದೆ ಎಂದು ಕಿಡಿಕಾರಿದರು.
ಇದೇ ವೇಳೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿ, ಕಾಂಗ್ರೆಸ್ ಕಚೇರಿಗೆ ಬಂದು ಕಾರ್ಯಕರ್ತರನ್ನು ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಹಲ್ಲೆ ಮಾಡಿದ್ದಾರೆ. ಈ ಮೂಲಕ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. , ‘ರಾಹುಲ್ ಗಾಂಧಿ ವಿರುದ್ಧ ಇದು ರಾಜಕೀಯ ದುರುದ್ಧೇಶದ ಕ್ರಮ’ ಎಂದು ಅಸಹನೆ ವ್ಯಕ್ತಪಡಿಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಮಾತನಾಡಿ, ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿಗೆ ಹೋಗಲು ಬಿಡುತ್ತಿಲ್ಲ. ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಕೈಗೆ ಗಾಯ ಮಾಡಿದ್ದಾರೆ. ದಿನೇ
ಶ್ ಗುಂಡೂರಾವ್, ಹೆಚ್ ಕೆ ಪಾಟೀಲ್ ರನ್ನ ತಳ್ಳಿದ್ದಾರೆ. ಬಿ.ವಿ ಶ್ರೀನಿವಾಸ್ಗೆ ಬೂಟ್ ಗಾಲಿನಲ್ಲಿ ಒದ್ದಿದ್ದಾರೆ ಎಂದು ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದರು.
ಇನ್ನು, ‘ಗಾಂಧಿ ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಅವರ ಆಸ್ತಿಯನ್ನು ದೇಶಕ್ಕಾಗಿ ಬರೆದು ಕೊಟ್ಟಿದ್ದಾರೆ ಎಂದ ರಾಮಲಿಂಗಾ ರೆಡ್ಡಿ, ಬಿಜೆಪಿಯವರು ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಆರ್.ಎಸ್.ಎಸ್, ವಿಶ್ವ ಹಿಂದು ಪರಿಷತ್ನವರು ಒಬ್ಬರಾದರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರಾ? ಎಂದು ಪ್ರಶ್ನಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…