ಚುನಾವಣೆ ಪೂರ್ವದಲ್ಲಿ ರಾಹುಲ್ ಗಾಂಧಿ ಅವರು ಜೆಡಿಎಸ್ ನ್ನು ಬಿಜೆಪಿಯ ಬಿ-ಟೀಂ ಎಂದು ಕರೆಯದೇ ಇದ್ದರೆ ಜೆಡಿಎಸ್ 70 ಸ್ಥಾನ ಗಳಿಸುತ್ತಿತ್ತು. ಬಿಜೆಪಿ 70 ಸ್ಥಾನ ದಾಟುತ್ತಿರಲಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ನಿನ್ನೆ ವಿಧಾನಸಭೆಯ ಚರ್ಚೆ ವೇಳೆ ಮಧ್ಯಪ್ರವೇಶಿಸಿದ ರೇವಣ್ಣ ಅವರು, ಚುನಾವಣೆಗೆ ಮುನ್ನ ಹಾಸನದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೆಡಿಎಸ್ ಬಿಜೆಪಿಯ ಬಿ-ಟೀಂ ಇದ್ದಂತೆ ಹೇಳಿದ್ದರು. ಅದರ ಪರಿಣಾಮ ನಮಗೆ 30 ಸ್ಥಾನಗಳು ಕಡಿಮೆಯಾದವು. ಬಿಜೆಪಿ 110 ಸ್ಥಾನ ಗಳಿಸಲು ಆ ಹೇಳಿಕೆಗೆ ಕಾರಣ. ಬಿಜೆಪಿ ಗೆದ್ದಿರುವ ಸ್ಥಾನಗಳಲ್ಲಿ 30 ಕ್ಷೇತ್ರಗಳ್ಲಲಿ ಜೆಡಿಎಸ್ ಗೆಲ್ಲಬೇಕಿತ್ತು. ರಾಹುಲ್ ಹೇಳಿಕೆಯಿಂದ ನಾವು ಸೋಲು ಕಂಡೆವು. ಇಲ್ಲವಾಗಿದ್ದರೆ ಜೆಡಿಎಸ್ 70 ಸ್ಥಾನಗಳನ್ನು ಗೆಲ್ಲುತ್ತಿತ್ತು. ಬಿಜೆಪಿ 70 ಸ್ಥಾನಕ್ಕೆ ನಿಲ್ಲುತ್ತಿತ್ತು ಎಂದು ಹೇಳಿದರು.
ಆಗ ಮಧ್ಯಪ್ರವೇಶಿಸಿದ ಬಿಜೆಪಿಯ ಬಸವರಾಜ್ ಬೊಮ್ಮಾಯಿ ಅವರು ರಾಹುಲ್ ಗಾಂಧಿ ಅವರ ಹೇಳಿಕೆ ಸತ್ಯವೋ ಸುಳ್ಳೋ ಎಂಬುದನ್ನು ಸ್ಪಷ್ಟಪಡಿಸಿ ಎಂದರು. ಬಿಜೆಪಿ ಇನ್ನೊಬ್ಬ ಸದಸ್ಯ ಅರವಿಂದಲಿಂಬಾವಳಿ, ರೇವಣ್ಣ ಮಾತು ಆರಂಭಿಸುವ ಮುನ್ನವೇಸತ್ಯ ಹೇಳುತ್ತೇನೆ ಎಂದಿದ್ದಾರೆ. ಹಾಗಾಗಿ ಅವರು ಹೇಳಿರುವುದೆಲ್ಲ ಸತ್ಯ ಎಂದರು. ರಾಹುಲ್ ಗಾಂಧಿ ಆ ರೀತಿ ಹೇಳಿಕೆ ನೀಡಿದ್ದರಿಂದ ಜೆಡಿಎಸ್ 38 ಸ್ಥಾನ ಗೆದ್ದಿದೆ. ಇಲ್ಲದಿದ್ದೆ ಇನ್ನು ಕಡಿಮೆ ಕ್ಷೇತ್ರಗಳ್ಲಲಿ ಗೆಲ್ಲುತ್ತಿತ್ತು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಮಧ್ಯಪ್ರವೇಶಿಸಿದ ರಮೇಶ್ಕುಮಾರ್ ಅವರು , ರಾಹುಲ್ ಹೇಳಿಕೆಯಿಂದ ಜೆಡಿಎಸ್ -ಬಿಜೆಪಿ ಇಬ್ಬರಿಗೂ ಲಾಭವಾಗಿದೆ. ನೀವು ಅವರಿಗೆ ಥ್ಯಾಂಕ್ಸ ಹೇಳಿ, ನಾವು ರಾಹುಲ್ಗೆ ಥ್ಯಾಂಕ್ಸ್ ಹೇಳುತ್ತೇವೆ ಎಂದು ಚರ್ಚೆಗೆ ತೆರೆ ಎಳೆದರು.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…