ಚುನಾವಣೆ ಪೂರ್ವದಲ್ಲಿ ರಾಹುಲ್ ಗಾಂಧಿ ಅವರು ಜೆಡಿಎಸ್ ನ್ನು ಬಿಜೆಪಿಯ ಬಿ-ಟೀಂ ಎಂದು ಕರೆಯದೇ ಇದ್ದರೆ ಜೆಡಿಎಸ್ 70 ಸ್ಥಾನ ಗಳಿಸುತ್ತಿತ್ತು. ಬಿಜೆಪಿ 70 ಸ್ಥಾನ ದಾಟುತ್ತಿರಲಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ನಿನ್ನೆ ವಿಧಾನಸಭೆಯ ಚರ್ಚೆ ವೇಳೆ ಮಧ್ಯಪ್ರವೇಶಿಸಿದ ರೇವಣ್ಣ ಅವರು, ಚುನಾವಣೆಗೆ ಮುನ್ನ ಹಾಸನದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೆಡಿಎಸ್ ಬಿಜೆಪಿಯ ಬಿ-ಟೀಂ ಇದ್ದಂತೆ ಹೇಳಿದ್ದರು. ಅದರ ಪರಿಣಾಮ ನಮಗೆ 30 ಸ್ಥಾನಗಳು ಕಡಿಮೆಯಾದವು. ಬಿಜೆಪಿ 110 ಸ್ಥಾನ ಗಳಿಸಲು ಆ ಹೇಳಿಕೆಗೆ ಕಾರಣ. ಬಿಜೆಪಿ ಗೆದ್ದಿರುವ ಸ್ಥಾನಗಳಲ್ಲಿ 30 ಕ್ಷೇತ್ರಗಳ್ಲಲಿ ಜೆಡಿಎಸ್ ಗೆಲ್ಲಬೇಕಿತ್ತು. ರಾಹುಲ್ ಹೇಳಿಕೆಯಿಂದ ನಾವು ಸೋಲು ಕಂಡೆವು. ಇಲ್ಲವಾಗಿದ್ದರೆ ಜೆಡಿಎಸ್ 70 ಸ್ಥಾನಗಳನ್ನು ಗೆಲ್ಲುತ್ತಿತ್ತು. ಬಿಜೆಪಿ 70 ಸ್ಥಾನಕ್ಕೆ ನಿಲ್ಲುತ್ತಿತ್ತು ಎಂದು ಹೇಳಿದರು.
ಆಗ ಮಧ್ಯಪ್ರವೇಶಿಸಿದ ಬಿಜೆಪಿಯ ಬಸವರಾಜ್ ಬೊಮ್ಮಾಯಿ ಅವರು ರಾಹುಲ್ ಗಾಂಧಿ ಅವರ ಹೇಳಿಕೆ ಸತ್ಯವೋ ಸುಳ್ಳೋ ಎಂಬುದನ್ನು ಸ್ಪಷ್ಟಪಡಿಸಿ ಎಂದರು. ಬಿಜೆಪಿ ಇನ್ನೊಬ್ಬ ಸದಸ್ಯ ಅರವಿಂದಲಿಂಬಾವಳಿ, ರೇವಣ್ಣ ಮಾತು ಆರಂಭಿಸುವ ಮುನ್ನವೇಸತ್ಯ ಹೇಳುತ್ತೇನೆ ಎಂದಿದ್ದಾರೆ. ಹಾಗಾಗಿ ಅವರು ಹೇಳಿರುವುದೆಲ್ಲ ಸತ್ಯ ಎಂದರು. ರಾಹುಲ್ ಗಾಂಧಿ ಆ ರೀತಿ ಹೇಳಿಕೆ ನೀಡಿದ್ದರಿಂದ ಜೆಡಿಎಸ್ 38 ಸ್ಥಾನ ಗೆದ್ದಿದೆ. ಇಲ್ಲದಿದ್ದೆ ಇನ್ನು ಕಡಿಮೆ ಕ್ಷೇತ್ರಗಳ್ಲಲಿ ಗೆಲ್ಲುತ್ತಿತ್ತು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಮಧ್ಯಪ್ರವೇಶಿಸಿದ ರಮೇಶ್ಕುಮಾರ್ ಅವರು , ರಾಹುಲ್ ಹೇಳಿಕೆಯಿಂದ ಜೆಡಿಎಸ್ -ಬಿಜೆಪಿ ಇಬ್ಬರಿಗೂ ಲಾಭವಾಗಿದೆ. ನೀವು ಅವರಿಗೆ ಥ್ಯಾಂಕ್ಸ ಹೇಳಿ, ನಾವು ರಾಹುಲ್ಗೆ ಥ್ಯಾಂಕ್ಸ್ ಹೇಳುತ್ತೇವೆ ಎಂದು ಚರ್ಚೆಗೆ ತೆರೆ ಎಳೆದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…