Featured

ರಾಹುಲ್‌ ಗಾಂಧಿ ಪಿಎ ಎಂದು ಕರೆ ಮಾಡಿ ಯು.ಟಿ. ಖಾದರ್ ಗೆ ವಂಚನೆಗೆ ಯತ್ನ : ಸೈಬರ್ ಕ್ರೈಂಗೆ ದೂರು – ಪ್ರಕರಣ ದಾಖಲು – VIshwanews24

ರಾಹುಲ್‌ ಗಾಂಧಿ ಪಿಎ ಎಂದು ಕರೆ ಮಾಡಿ ಯು.ಟಿ. ಖಾದರ್ ಗೆ ವಂಚನೆಗೆ ಯತ್ನ : ಸೈಬರ್ ಕ್ರೈಂಗೆ ದೂರು – ಪ್ರಕರಣ ದಾಖಲು

ಮಂಗಳೂರು: ರಾಹುಲ್‌ ಗಾಂಧಿ ಪಿಎ ಎಂದು ಹೇಳಿಕೊಂಡು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್‌ ಗೆ ಕರೆ ಮಾಡಿ ವಂಚಿಸಲು ಯತ್ನಿಸಿರುವಂತಹ ಘಟನೆ ನಡೆದಿದೆ. ಅಪರಿಚಿತ ಸಂಖ್ಯೆಯಿಂದ ಯು.ಟಿ ಖಾದರ್‌ ಮೊಬೈಲ್‌ಗೆ 2 ಸಲ ಫೋನ್‌ ಮಾಡಿದ್ದಾರೆ.

ಯು.ಟಿ. ಖಾದರ್ ಅವರ ಸಮಯ ಪ್ರಜ್ಞೆಯಿಂದ ಮೋಸ ಹೋಗುವುದು ತಪ್ಪಿದೆ. ವಿಷಯ ಗೊತ್ತಾದ ತಕ್ಷಣ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ದೂರು ನೀಡಿದ್ದು, ಖಾದರ್ ಅವರಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರ ಮಧ್ಯಾಹ್ನ ಯು.ಟಿ.ಖಾದರ್ ಅವರ ಮೊಬೈಲ್ ಗೆ 8146006626 ನಂಬರ್‌ನಿಂದ ಕರೆ ಬಂದಿತ್ತು. ಸಭೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ತಕ್ಷಣ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ‘Good afternoon this side Kaniskha Singh pa to sri rahul Gandhi ji call me’ ಎಂದು ಬರೆಯಲಾಗಿತ್ತು. ಈ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ .ಕೆ.ಸಿ. ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರು ಕಾಲರ್ ಮೂಲಕ ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago