ಮಂಗಳೂರು: ರಾಹುಲ್ ಗಾಂಧಿ ಪಿಎ ಎಂದು ಹೇಳಿಕೊಂಡು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಗೆ ಕರೆ ಮಾಡಿ ವಂಚಿಸಲು ಯತ್ನಿಸಿರುವಂತಹ ಘಟನೆ ನಡೆದಿದೆ. ಅಪರಿಚಿತ ಸಂಖ್ಯೆಯಿಂದ ಯು.ಟಿ ಖಾದರ್ ಮೊಬೈಲ್ಗೆ 2 ಸಲ ಫೋನ್ ಮಾಡಿದ್ದಾರೆ.
ಯು.ಟಿ. ಖಾದರ್ ಅವರ ಸಮಯ ಪ್ರಜ್ಞೆಯಿಂದ ಮೋಸ ಹೋಗುವುದು ತಪ್ಪಿದೆ. ವಿಷಯ ಗೊತ್ತಾದ ತಕ್ಷಣ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ದೂರು ನೀಡಿದ್ದು, ಖಾದರ್ ಅವರಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಸೋಮವಾರ ಮಧ್ಯಾಹ್ನ ಯು.ಟಿ.ಖಾದರ್ ಅವರ ಮೊಬೈಲ್ ಗೆ 8146006626 ನಂಬರ್ನಿಂದ ಕರೆ ಬಂದಿತ್ತು. ಸಭೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ತಕ್ಷಣ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್ನ್ನು ಪರಿಶೀಲಿಸಿದಾಗ ‘Good afternoon this side Kaniskha Singh pa to sri rahul Gandhi ji call me’ ಎಂದು ಬರೆಯಲಾಗಿತ್ತು. ಈ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ .ಕೆ.ಸಿ. ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರು ಕಾಲರ್ ಮೂಲಕ ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…