ಈಗಾಗಲೇ ಸಿಡಬ್ಲುಸಿ ಸಭೆಯಲ್ಲಿ ಕಾಂಗ್ರೆಸ್ನಿಂದ ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎಂದು ನಿರ್ಧಾರ ಮಾಡಲಾಗಿತ್ತು. ಆದರೆ, ಈ ನಿರ್ಣಯವನ್ನು ಮಿತ್ರಪಕ್ಷಗಳು ಬೆಂಬಲಿಸುತ್ತವೆಯೇ ಅಥವಾ ವಿರೋಧ ವ್ಯಕ್ತಪಡಿಸುತ್ತವೆಯೇ ಎಂಬ ಅನುಮಾನವೂ ಇತ್ತು. ಅದಕ್ಕೆಲ್ಲ ತೆರೆ ಎಳೆದಿರುವ ಹಿರಿಯ ರಾಜಕಾರಣಿ ಮತ್ತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡರು ಜೆಡಿಎಸ್ನ ಬೆಂಬಲವನ್ನು ಕಾಂಗ್ರೆಸ್ಗೆ ನೀಡಿದ್ದಾರೆ.ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ನಮ್ಮ ಅಭ್ಯಂತರವಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮುಂದುವರಿಯಲಿದೆ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಅಚ್ಚರಿ ಮೂಡಿಸಿದ್ದಾರೆ.
ಮಹಾಮೈತ್ರಿಯಲ್ಲಿ ಅತ್ಯಂತ ಹಿರಿಯ ರಾಜಕಾರಣಿ ಮತ್ತು ಮಾಜಿ ಪ್ರಧಾನಿಯೂ ಆಗಿರುವ ದೇವೇಗೌಡರೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳೊಂದಿಗೆ ಸೇರಿ ಕಣಕ್ಕಿಳಿಯುವ ಮೂಲಕ ತೃತೀಯರಂಗದ ಪಕ್ಷಗಳು ಒಗ್ಗಟ್ಟಾಗಿ ಎನ್ಡಿಎ ವಿರುದ್ಧ ನಿಲ್ಲಲು ತಂತ್ರ ರೂಪಿಸಿದ್ದವು. ಆದರೆ ಮುಂದಿನ ಅವಧಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ಅಭ್ಯಂತರವಿಲ್ಲ ಎನ್ನುವ ಮೂಲಕ ಬೆಂಬಲ ಸೂಚಿಸಿರುವ ದೇವೇಗೌಡರ ನಡೆಯ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಈ ಮೈತ್ರಿ ಲೋಕಸಭಾ ಚುನಾವಣೆಗೂ ಮುಂದುವರಿಯಲಿದೆ ಎಂದು ದೇವೇಗೌಡರು ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದಾರೆ
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…