2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ , ಬಿಜೆಪಿಯನ್ನು ಸೋಲಿಸಲು ಏನು ಅಗತ್ಯವೋ ಅದೆಲ್ಲವನ್ನೂ ಮಾಡಬೇಕು. ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಗೆ ಸೂಕ್ತ :ಸಿಎಂ ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿರೋಧ ಪಕ್ಷಗಳಿಂದ ಪ್ರಧಾನಿ ಅಭ್ಯರ್ಥಿಯಾಗಲು ಸಮರ್ಥ ನಾಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014 ರಲ್ಲಿ ಇದ್ದಂಥ ರಾಜಕೀಯ ಸ್ಥಿತಿ ಈಗ ಇಲ್ಲ. 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ. ಹೀಗಾಗಿ ದೇಶದ ಹಿತದೃಷ್ಟಿಯಿಂದ ಬಿಜೆಪಿಯೇತರ ಪಕ್ಷಗಳೆಲ್ಲ ಒಂದಾಗಬೇಕು. ಬಿಜೆಪಿಯನ್ನು ಸೋಲಿಸಲು ಏನು ಅಗತ್ಯವೋ ಅದೆಲ್ಲವನ್ನೂ ಮಾಡಬೇಕು ಎಂದಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಸಾಧಿಸಿದ್ದೇನು ಎಂದು ಪ್ರಶ್ನಿಸಿರುವ ಹೆಚ್ಡಿಕೆ, ಒಂದೇ ಪಕ್ಷದ ಸರ್ಕಾರಗಳಿಗಿಂತ ಸಮ್ಮಿಶ್ರ ಸರ್ಕಾರಗಳ ಕಾಲದಲ್ಲೇ ದೇಶದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…