ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.
ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್ಎಸ್ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…