ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.
ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್ಎಸ್ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…