ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.
ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್ಎಸ್ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…