ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.
ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್ಎಸ್ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…