Featured

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾದ ಕಾರಣ ಭಯಭೀತರಾಗಿ ಬಿಜೆಪಿಯಿಂದ ಸೇಡಿನ ರಾಜಕಾರಣ : ವಿ.ಎಸ್ ಉಗ್ರಪ್ಪ – Vishwanews24

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾದ ಕಾರಣ ಭಯಭೀತರಾಗಿ ಬಿಜೆಪಿಯಿಂದ ಸೇಡಿನ ರಾಜಕಾರಣ : ವಿ.ಎಸ್ ಉಗ್ರಪ್ಪ – Vishwanews24

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಇ.ಡಿ ತನಿಖೆ ನಡೆಸುವ ಮೂಲಕ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆರೋಪ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಂವಿಧಾನದ ಆರ್ಟಿಕಲ್ 15(1) ಎ ಹಾಗೂ ಆರ್ಟಿಕಲ್ 20 ವಿರುದ್ಧವಾಗಿ ನಡೆಯುತ್ತಿದ್ದಾರೆ. ಸಂವಿಧಾನದ ಅರಿವು ದೇಶದ ಸ್ವಾತಂತ್ರ್ಯ ಚಳವಳಿ ಅರಿವು ಇದ್ದಿದ್ದರೆ ಸೇಡಿನ ರಾಜಕಾರಣ ಮಾಡುತ್ತಿರಲಿಲ್ಲ ಎಂದರು.

ಆಡಳಿತ ವೈಫಲ್ಯವನ್ನು ಜನರ ಮುಂದೆ ಇಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಹುಲ್ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮೋದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನ್ಯಾಷನಲ್ ಹೆರಾಲ್ಡ್ ಸ್ವಾತಂತ್ರ್ಯ ಚಳವಳಿಯ ಹಾಗೂ ಕಾಂಗ್ರೆಸ್ ಜನಪರ ಕಾಳಜಿ ಧ್ವನಿಯಾಗಿತ್ತು. ಖುಲಾಸೆ ಆದ ಪ್ರಕರಣವನ್ನು ಮತ್ತೆ‌ ಕೆದಕಿ ತನಿಖೆ ನಡೆಸಲಾಗುತ್ತಿದೆ. ಇದು ಸೇಡಿ‌ನ ರಾಜಕೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾದ ಕಾರಣಕ್ಕಾಗಿ ಭಯಭೀತರಾಗಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದ ಅವರು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಚಾಣಕ್ಯ ವಿವಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ 116.16 ಎಕರೆ ಜಮೀನು ನೀಡಿದೆ. ಕೈಗಾರಿಕಾ ಉದ್ದೇಶದಿಂದ 2006 ರಲ್ಲಿ ಏರೋಸ್ಪೇಸ್ ಗೆ ಈ ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ, ಅದನ್ನು 2021 ರಲ್ಲಿ 50 ಕೋಟಿಗೆ ಚಾಣಕ್ಯ ವಿವಿಗೆ ನೀಡಲಾಗುತ್ತದೆ ಎಂದರು.

ಇದೇ ಜಮೀನನ್ನು ರೈತರಿಂದ ವಶಪಡಿಸಿಕೊಂಡ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಒಂದು ಎಕರೆಗೆ 1.50 ಕೋಟಿ ಪರಿಹಾರ ನೀಡಿತ್ತು. ಆದರೆ, ಯಾವ ಉದ್ದೇಶಕ್ಕಾಗಿ ವಶಪಡಿಸಿಕೊಳ್ಳಲಾಗಿತ್ತು ಅದನ್ನು ಬಿಟ್ಟು ಸಾವಿರ ಕೋಟಿ ಬೆಳೆಬಾಳುವ ಜಮೀನನ್ನು ಚಾಣಕ್ಯ ವಿ.ವಿ ಗೆ ಕೊಡಲಾಗಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ಆಗಿಲ್ಲವೆ?ಎಂದು ಪ್ರಶ್ನಿಸಿದರು.

ಸರ್ಕಾರ ಅಥವಾ ಸಚಿವರು ಚಾಣಕ್ಯ ವಿವಿ ಜೊತೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಅನುಮಾನ ಇದೆ.‌ ರಾಷ್ಟ್ರೋತ್ಥಾನ ಪರಿಷತ್ ಗೂ ಜಮೀನು ನೀಡಲಾಗಿದೆ. ಇದರಲ್ಲಿ ಎಷ್ಟು ಅಕ್ರಮ ಹಣ ವರ್ಗಾವಣೆ ಆಗಿದೆ. ಸಿಎಜಿ ವರದಿಯಲ್ಲೂ ಇದರ ಬಗ್ಗೆ ಉಲ್ಲೇಖ ಮಾಡಲಾಗಿದೆ. ಹಾಗಿದ್ದರೂ ಈ ಬಗ್ಗೆ ಏಕೆ ಇ.ಡಿ ತನಿಖೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ರಾಜ್ಯ ಕಾಂಗ್ರೆಸ್ ಮುಖಂಡರೂ ಸೇರಿದಂತೆ ಮಹಿಳೆಯರ ಜೊತೆಗೂ ಕಾನೂನು ಮೀರಿ ವರ್ತಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

5 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

5 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

5 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

5 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago