ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಇ.ಡಿ ತನಿಖೆ ನಡೆಸುವ ಮೂಲಕ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆರೋಪ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಂವಿಧಾನದ ಆರ್ಟಿಕಲ್ 15(1) ಎ ಹಾಗೂ ಆರ್ಟಿಕಲ್ 20 ವಿರುದ್ಧವಾಗಿ ನಡೆಯುತ್ತಿದ್ದಾರೆ. ಸಂವಿಧಾನದ ಅರಿವು ದೇಶದ ಸ್ವಾತಂತ್ರ್ಯ ಚಳವಳಿ ಅರಿವು ಇದ್ದಿದ್ದರೆ ಸೇಡಿನ ರಾಜಕಾರಣ ಮಾಡುತ್ತಿರಲಿಲ್ಲ ಎಂದರು.
ಆಡಳಿತ ವೈಫಲ್ಯವನ್ನು ಜನರ ಮುಂದೆ ಇಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಹುಲ್ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮೋದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನ್ಯಾಷನಲ್ ಹೆರಾಲ್ಡ್ ಸ್ವಾತಂತ್ರ್ಯ ಚಳವಳಿಯ ಹಾಗೂ ಕಾಂಗ್ರೆಸ್ ಜನಪರ ಕಾಳಜಿ ಧ್ವನಿಯಾಗಿತ್ತು. ಖುಲಾಸೆ ಆದ ಪ್ರಕರಣವನ್ನು ಮತ್ತೆ ಕೆದಕಿ ತನಿಖೆ ನಡೆಸಲಾಗುತ್ತಿದೆ. ಇದು ಸೇಡಿನ ರಾಜಕೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾದ ಕಾರಣಕ್ಕಾಗಿ ಭಯಭೀತರಾಗಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದ ಅವರು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಚಾಣಕ್ಯ ವಿವಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ 116.16 ಎಕರೆ ಜಮೀನು ನೀಡಿದೆ. ಕೈಗಾರಿಕಾ ಉದ್ದೇಶದಿಂದ 2006 ರಲ್ಲಿ ಏರೋಸ್ಪೇಸ್ ಗೆ ಈ ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ, ಅದನ್ನು 2021 ರಲ್ಲಿ 50 ಕೋಟಿಗೆ ಚಾಣಕ್ಯ ವಿವಿಗೆ ನೀಡಲಾಗುತ್ತದೆ ಎಂದರು.
ಇದೇ ಜಮೀನನ್ನು ರೈತರಿಂದ ವಶಪಡಿಸಿಕೊಂಡ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಒಂದು ಎಕರೆಗೆ 1.50 ಕೋಟಿ ಪರಿಹಾರ ನೀಡಿತ್ತು. ಆದರೆ, ಯಾವ ಉದ್ದೇಶಕ್ಕಾಗಿ ವಶಪಡಿಸಿಕೊಳ್ಳಲಾಗಿತ್ತು ಅದನ್ನು ಬಿಟ್ಟು ಸಾವಿರ ಕೋಟಿ ಬೆಳೆಬಾಳುವ ಜಮೀನನ್ನು ಚಾಣಕ್ಯ ವಿ.ವಿ ಗೆ ಕೊಡಲಾಗಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ಆಗಿಲ್ಲವೆ?ಎಂದು ಪ್ರಶ್ನಿಸಿದರು.
ಸರ್ಕಾರ ಅಥವಾ ಸಚಿವರು ಚಾಣಕ್ಯ ವಿವಿ ಜೊತೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಅನುಮಾನ ಇದೆ. ರಾಷ್ಟ್ರೋತ್ಥಾನ ಪರಿಷತ್ ಗೂ ಜಮೀನು ನೀಡಲಾಗಿದೆ. ಇದರಲ್ಲಿ ಎಷ್ಟು ಅಕ್ರಮ ಹಣ ವರ್ಗಾವಣೆ ಆಗಿದೆ. ಸಿಎಜಿ ವರದಿಯಲ್ಲೂ ಇದರ ಬಗ್ಗೆ ಉಲ್ಲೇಖ ಮಾಡಲಾಗಿದೆ. ಹಾಗಿದ್ದರೂ ಈ ಬಗ್ಗೆ ಏಕೆ ಇ.ಡಿ ತನಿಖೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ರಾಜ್ಯ ಕಾಂಗ್ರೆಸ್ ಮುಖಂಡರೂ ಸೇರಿದಂತೆ ಮಹಿಳೆಯರ ಜೊತೆಗೂ ಕಾನೂನು ಮೀರಿ ವರ್ತಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…