Featured

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್ ನನ್ನು ಹತ್ಯೆ ಮಾಡಿದವರು , ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು ,ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರೂ ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಹೇಳಿದ್ದಾರೆ.

ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು ಹಿಂದುಗಳು ಒಳ್ಳೆಯವರು ಎಂದಿದ್ದ ಯಾವಾಗ 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಅನಿವಾರ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago