Featured

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್ ನನ್ನು ಹತ್ಯೆ ಮಾಡಿದವರು , ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು ,ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರೂ ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಹೇಳಿದ್ದಾರೆ.

ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು ಹಿಂದುಗಳು ಒಳ್ಳೆಯವರು ಎಂದಿದ್ದ ಯಾವಾಗ 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಅನಿವಾರ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago