ತಿರುನಂತಪುರಂ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್ನ ಹಾಲಿ ಸಂಸದ ರಾಹುಲ್ ಗಾಂಧಿ ವಯನಾಡಿನಿಂದಲೇ ಸ್ಪರ್ಧೆ ಮಾಡಲಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಯಾನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ರಾಗಾ ಸೋಲು ಕಂಡರು, ವಯನಾಡಿನಲ್ಲಿ ಜಯ ಸಾಧಿಸಿದ್ದರು. ಇದೇ ಸಮಯಕ್ಕೆ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕೇರಳದ ಜನತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಬಿಜೆಪಿಯ ನಿಷ್ಠಾವಂತ ಕಾರ್ಯರ್ತರಾಗಿದ್ದ ಕೆ. ಸುರೇಂದ್ರನ್ 2020ರಲ್ಲಿ ಕೇರಳ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾದರು. 2019 ರಲ್ಲಿ, ಸುರೇಂದ್ರನ್ ಪತ್ತನಂತಿಟ್ಟದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಯಶಸ್ವಿಯಾಗಲಿಲ್ಲ. 2018ರಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸುರೇಂದ್ರನ್ ಒಂದು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಬಾರಿ ಕೇರಳದಲ್ಲಿ ಬಿಜೆಪಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಅವರನ್ನು ರಾಹುಲ್ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿಸಲಾಗಿದೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…