ಉಡುಪಿ: ನಿರ್ಧಿಷ್ಟ ಕಾಲಮಿತಿಯೊಳಗೆ ರಾಷ್ಟ್ರೀಯ ಹೆದ್ದಾರಿಯ ತೇಪೆ ಕಾಮಗಾರಿ ಮುಗಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ನವಯುಗ ಕಂಪನಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಇಂದು ಮಾತನಾಡಿದ ಅವರು, ನವಯುಗ ಕಂಪನಿ ಟೋಲ್ ಸಂಗ್ರಹ ಮಾಡಿದ ಹಣದಲ್ಲಿ ರಸ್ತೆಯನ್ನು ಕೂಡಾ ನಿರ್ವಹಣೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಹೊಂಡ ಗುಂಡಿಯಿಂದ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ರಸ್ತೆ ನಿರ್ವಹಣೆಗೆ ಕಾಲಮಿತಿ ನಿಗದಿ ಮಾಡುತ್ತೇವೆ. ಅಷ್ಟರೊಳಗೆ ಸರಿಪಡಿಸದಿದ್ದಲ್ಲಿ ಟೋಲ್ ಸಂಗ್ರಹಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು
ಇದೇ ವೇಳೆ ಅಧಿಕಾರಿಗಳು ಸಭೆಗೆ ಗೈರಾಗುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಉಡುಪಿ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ಗೈರಾಗುತ್ತಿರುವುದು ಸಹ್ಯವಲ್ಲ. ಯಾವುದೇ ಅಧಿಕಾರಿ ಇರಲಿ ಸಭೆಗೆ ಬಾರದೇ ಇದ್ದಲ್ಲಿ ಹೇಗೆ ಬರಿಸಬೇಕು ಎಂಬುದು ನಮಗೆ ಗೊತ್ತು. ಇದರಲ್ಲಿ ಯಾವುದೇ ಕಾಂಪ್ರಮೈಸ್ ಇಲ್ಲ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕಾರಿಗಳ ಗೈರಿನ ಕುರಿತು ವರದಿ ಮಾಡುತ್ತೇವೆ. ಸಚಿವರಿಗೂ ಮಾಹಿತಿ ನೀಡುತ್ತೇವೆ. ಸ್ವಲ್ಪ ಕಾದು ನೋಡಿ ಏನು ಕ್ರಮ ಅಂತ ನಿಮಗೆ ಗೊತ್ತಾಗುತ್ತದೆ ಎಂದು ಹೇಳಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…