ರಾ.ಹೆ ಸೂಚನ ಫಲಕಗಳಿಗೆ ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟೀಕೆ:Vishwanews24
ಕಾಪು: ಕಾಪುವಿಗೆ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಆಗಮಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಫ್ಲೆಕ್ಸ್ ಗಳು ರಾರಾಜಿಸುತ್ತಿದೆ.
ಈ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಳವಡಿಸಿರುವ ಹಲವಾರು ಸೂಚನ ಫಲಕಗಳಿಗೆ ಅಡ್ಡವಾಗಿ ಕಾಪು ಶಾಸಕರ ಫ್ಲೆಕ್ಸ್ ಗಳು ಬಿದ್ದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ಟೀಕೆಗಳು ವ್ಯಕ್ತವಾಗಿದೆ.
ಕಾನೂನಿನ ಅರಿವಿರುವ ಶಾಸಕರ ಈ ನಡೆ ಜನಸಾಮಾನ್ಯರನ್ನ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ.
ಜನಸಾಮಾನ್ಯರು ಹಾಕುವ ಬ್ಯಾನರ್ ಫ್ಲೆಕ್ಸ್ಗಳಿಗೆ ಕಾನೂನಿನ ಅಡ್ಡಿಪಡಿಸುವ ಹೆದ್ದಾರಿ ಪ್ರಾಧಿಕಾರ ಮತ್ತು ಕಾಪು ಪುರಸಭೆ ಈ ವಿಚಾರವಾಗಿ ಮೌನವಹಿಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಸುಲಭವಾಗಿ ಎಂದು ಮತ್ತು ಸರಿಯಾದ ಮಾಹಿತಿ ಸಿಗಲಿ ಎಂದು ಅಳವಡಿಸಿರುವ ನಾಮಫಲಕಗಳು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಅದರ ಮೇಲ್ಭಾಗದಲ್ಲಿಯೇ ಕಾಪು ಶಾಸಕರ ಫ್ಲೆಕ್ಸ್ ಗಳು ಪತ್ತೆಯಾಗಿದೆ.
ನಾಮಫಲಕಗಳ ಮೇಲೆ ಅಳವಡಿಸಿರುವ ಪ್ಲೆಕ್ಸ್ ಗಳನ್ನ ಅಧಿಕಾರಿಗಳು ತೆರವುಗೊಳಿಸುತ್ತಾರೆಯೋ ಅಥವಾ ಶಾಸಕರ ಕೃಪಾಕಟಾಕ್ಷದಲ್ಲಿ ಅವರಿಗೆ ಬೆಂಬಲ ಕೊಡುತ್ತಾ ಇರುತ್ತಾರೆಯೋ ಎಂಬುದನ್ನು ಕಾದು ನೋಡಬೇಕಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…