Featured

ರಿಕ್ಷಾ ಅಪಘಾತದಲ್ಲಿ ಸಿಲುಕಿದ್ದ ಮಗುವಿನ ಶಸ್ತ್ರಚಿಕಿತ್ಸೆಗೆ ಕಾಪು ಕುಲಾಲ ಯುವ ವೇದಿಕೆಯಿಂದ ಧನ ಸಹಾಯ – Vishwanews24

ಕಾಪು. : ಸಂಬಂಧಿಕರ ಮನೆಯಲ್ಲಿ ನಡೆಯಲಿರುವ ರಾತ್ರಿಯ ಕಾರ್ಯಕ್ರಮಕ್ಕೆ ರಿಕ್ಷಾದಲ್ಲಿ ಹೊರಟಿದ್ದ ಕುಟುಂಬವೊಂದು ರಿಕ್ಷಾ ಅಪಘಾತದಲ್ಲಿ ಸಿಲುಕಿ ರಿಕ್ಷಾದಲ್ಲಿದ್ದ ಪುಟ್ಟ ಮಗುವಿನ ಕಾಲೊಂದು ತೀವ್ರ ತರದಲ್ಲಿ ಜಖಂಗೊಂಡಿತ್ತು. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಮಗುವನ್ನು ಕೊಂಡೊಯ್ದಾಗ ಜಜ್ಜಲ್ಪಟ್ಟ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ವೈದ್ಯರು ಸೂಚನೆ ನೀಡಿದರು. ಕೂಲಿ ಕೆಲಸ ಮಾಡುತಿದ್ದ ಮಗುವಿನ ಪಾಲಕರು ಶಸ್ತ್ರ ಚಿಕಿತ್ಸೆಗೆ ತಗಲುವ ದುಬಾರಿ ವೆಚ್ಚವನ್ನು ಕೇಳಿಯೇ ಹೌಹಾರಿದ್ದರು. ಮಗುವಿನ ಭವಿಷ್ಯವನ್ನು ನೆನೆದು ಕಣ್ಣೀರಾದ ಪಾಲಕರು ಕಾಪು ಕುಲಾಲ ಯುವ ವೇದಿಕೆಗೆ ಸಹಕಾರಕ್ಕಾಗಿ ವಿನಂತಿಸಿಕೊಂಡರು.

ಕಾಪು ಕುಲಾಲ ಯುವ ವೇದಿಕೆಯು ಪುಟ್ಟ ಮಗು ದೈವಿಕ್ ನ ವಸ್ತುಸ್ಥಿತಿ ವಿವರಣೆಯ ಸಚಿತ್ರ ವರದಿಯೊಂದಿಗೆ ಸಹೃದಯಿ ದಾನಿಗಳಿಂದ ಧನ ಸಹಾಯಕ್ಕಾಗಿ ಮಾಡಿದ ಕಳಕಳಿಯ ಮನವಿಗೆ ಶೀಘ್ರ ಗತಿಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ ಪರಿಣಾಮ ಸಂಗ್ರಹವಾದ ತುರ್ತು ಸಹಾಯ ಧನವನ್ನು ದೈವಿಕ್ ನ ಪಾಲಕರಿಗೆ ದಿನಾಂಕ 17/ 02/ 2019 ರಂದು ಹಸ್ತಾಂತರಿಸಲಾಯಿತು.

ಸಹೃದಯಿ ಬಂಧುಗಳು ತಮ್ಮ ಶಕ್ತ್ಯಾನುಸಾರ ನೀಡಿದ ಧನ ಸಹಾಯ ₹ 39000/- ಸಾವಿರವನ್ನು ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರಿಸುವ ಸಂದರ್ಭ ಉದಯ ಕುಲಾಲ್ ಕಳತ್ತೂರು ಅಧ್ಯಕ್ಷರು ಕಾಪು ಕುಲಾಲ ಯುವವೇದಿಕೆ, ಸಂದೀಪ್ ಬಂಗೇರ ಶಂಕರಪುರ ಉಪಾಧ್ಯಕ್ಷರು ಕುಲಾಲ ಸಂಘ(ರಿ) ಕಾಪುವಲಯ, ಧೀರಜ್ ಕುಲಾಲ್ ಕುತ್ಯಾರು, ದಿನೇಶ್ ಶಂಕರಪುರ,ರವಿರಾಜ್ ಆಚಾರ್ಯರವರು ಉಪಸ್ಥಿತರಿದ್ದರು.

ಸಹಾಯ ಧನ ಸ್ವೀಕರಿಸಿದ ದೈವಿಕ್ ನ ಪಾಲಕರು ಧನ್ಯತಾ ಭಾವದಲಿ ಸಹೃದಯಿ ದಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಹಾಗೂ ತುರ್ತು ಸಹಾಯಕ್ಕೆ ಕೈ ಜೋಡಿಸಿದ ಸರ್ವರಿಗೂ ಕಾಪು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು.

ಇನ್ನೂ ಹೆಚ್ಚಿನ ಧನ ಸಹಾಯದ ಅಗತ್ಯವಿರುವ ಕಾರಣ ಸಹಾಯ ಧನ ನೀಡುವ ಸಹೃದಯರು ಮಗುವಿನ ತಂದೆ ಸಂತೋಷ್ ಕುಲಾಲ್ ರವರನ್ನು ಸಂಪರ್ಕಿಸಿ ನೀಡಬಹುದು

(9945713444)

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

19 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago