Featured

ಅರ್ನಬ್‌ ಗೋಸ್ವಾಮಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಿ : ಸುಪ್ರೀಂ ಕೋರ್ಟ್ -Vishwanews24

ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್‌ ಗೋಸ್ವಾಮಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಿ : ಸುಪ್ರೀಂ ಕೋರ್ಟ್ -Vishwanews24

ನವದೆಹಲಿ,  : 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಇನ್ನಿಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತಿಳಿಸಿದೆ.

ಈ ಸಂದರ್ಭದಲ್ಲೇ ನ್ಯಾಯಾಪೀಠವು, ”ಕ್ರಿಮಿನಲ್‌ ಕಾನೂನುಗಳನ್ನು ಆಡಳಿತರೂಢ ಸರ್ಕಾರ ದುರ್ಬಳಕೆ ಮಾಡದಂತೆ ನ್ಯಾಯಾಂಗ ನೋಡಿಕೊಳ್ಳಬೇಕು. ಹಾಗೆಯೇ ನ್ಯಾಯಾಂಗವು ಈ ಕ್ರಿಮಿನಲ್‌ ಕಾನೂನುಗಳು ನಾಗರಿಕರಿಗೆ ಕಿರುಕುಳ ನೀಡಲು ಬಳಸಲಾಗಿಲ್ಲ ಎಂಬುದನ್ನು ಖಾತರಿಪಡಿಸಬೇಕು” ಎಂದು ಹೇಳಿದೆ.

2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್‌ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ಮುಂಬೈ ಪೊಲೀಸರು ಹಠಾತ್ತನೇ ದಾಳಿ ನಡೆಸಿ ಅರ್ನಬ್‌ನ್ನು ಬಂಧಿಸಿದ್ದರು. ಹಾಗೆಯೇ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಜಾಮೀನು ಅರ್ಜಿ ಕೋರಿ ಅರ್ನಬ್‌ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ವಿಚಾರಣೆ ಮುಂದೂಡಿದ ಬಳಿಕ ಸರ್ಕಾರವು ಬಾಂಬೆ ಹೈಕೋರ್ಟ್‌ಗೆ ದೀಪಾವಳಿ ರಜೆ ಘೋಷಿಸಿತ್ತು. ಬಳಿಕ ಮಧ್ಯಂತರ ಜಾಮೀನು ಕೋರಿ ಅರ್ನಬ್‌ ಸುಪ್ರೀಂ ಕೋರ್ಟ್ ಕದ ತಟ್ಟಿದ್ದು ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ”ನಾವು ಅವರ ಚಾನೆಲ್ ನೋಡಲ್ಲ, ಆದರೆ ಅರ್ನಬ್ ಮೇಲೆ ಸರ್ಕಾರ ಗುರಿ ಮಾಡುವುದು ತಪ್ಪು” ಎಂದು ಹೇಳಿತ್ತು. ಹಾಗೆಯೇ ಜಾಮೀನು ಮಂಜೂರು ಮಾಡಿತ್ತು.

ಇದೀಗ ಶುಕ್ರವಾರ ಈ ಮಧ್ಯಂತರ ಜಾಮೀನನ್ನು ಮುಂದುವರಿಕೆ ಮಾಡಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago