ನವದೆಹಲಿ, : 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಇನ್ನಿಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತಿಳಿಸಿದೆ.
ಈ ಸಂದರ್ಭದಲ್ಲೇ ನ್ಯಾಯಾಪೀಠವು, ”ಕ್ರಿಮಿನಲ್ ಕಾನೂನುಗಳನ್ನು ಆಡಳಿತರೂಢ ಸರ್ಕಾರ ದುರ್ಬಳಕೆ ಮಾಡದಂತೆ ನ್ಯಾಯಾಂಗ ನೋಡಿಕೊಳ್ಳಬೇಕು. ಹಾಗೆಯೇ ನ್ಯಾಯಾಂಗವು ಈ ಕ್ರಿಮಿನಲ್ ಕಾನೂನುಗಳು ನಾಗರಿಕರಿಗೆ ಕಿರುಕುಳ ನೀಡಲು ಬಳಸಲಾಗಿಲ್ಲ ಎಂಬುದನ್ನು ಖಾತರಿಪಡಿಸಬೇಕು” ಎಂದು ಹೇಳಿದೆ.
2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ಮುಂಬೈ ಪೊಲೀಸರು ಹಠಾತ್ತನೇ ದಾಳಿ ನಡೆಸಿ ಅರ್ನಬ್ನ್ನು ಬಂಧಿಸಿದ್ದರು. ಹಾಗೆಯೇ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಜಾಮೀನು ಅರ್ಜಿ ಕೋರಿ ಅರ್ನಬ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ವಿಚಾರಣೆ ಮುಂದೂಡಿದ ಬಳಿಕ ಸರ್ಕಾರವು ಬಾಂಬೆ ಹೈಕೋರ್ಟ್ಗೆ ದೀಪಾವಳಿ ರಜೆ ಘೋಷಿಸಿತ್ತು. ಬಳಿಕ ಮಧ್ಯಂತರ ಜಾಮೀನು ಕೋರಿ ಅರ್ನಬ್ ಸುಪ್ರೀಂ ಕೋರ್ಟ್ ಕದ ತಟ್ಟಿದ್ದು ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ”ನಾವು ಅವರ ಚಾನೆಲ್ ನೋಡಲ್ಲ, ಆದರೆ ಅರ್ನಬ್ ಮೇಲೆ ಸರ್ಕಾರ ಗುರಿ ಮಾಡುವುದು ತಪ್ಪು” ಎಂದು ಹೇಳಿತ್ತು. ಹಾಗೆಯೇ ಜಾಮೀನು ಮಂಜೂರು ಮಾಡಿತ್ತು.
ಇದೀಗ ಶುಕ್ರವಾರ ಈ ಮಧ್ಯಂತರ ಜಾಮೀನನ್ನು ಮುಂದುವರಿಕೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…