Featured

ರೀಲ್ಸ್ ಮಾಡಲು ಹೋಗಿ 300 ಅಡಿ ಆಳದ ಕಮರಿಗೆ ಬಿದ್ದು ಯುವತಿ ದಾರುಣ ಸಾವು – vishwanews24

ರೀಲ್ಸ್ ಮಾಡಲು ಹೋಗಿ 300 ಅಡಿ ಆಳದ ಕಮರಿಗೆ ಬಿದ್ದು ಯುವತಿ ದಾರುಣ ಸಾವು

ರಾಯಗಢ: ಮಹಾರಾಷ್ಟ್ರದ ರಾಯಗಢ ಬಳಿಯ ಕುಂಭೆ ಜಲಪಾತದಲ್ಲಿ ವಿಡಿಯೊ ಮಾಡುತ್ತಿದ್ದ 26 ವರ್ಷದ ಇನ್ಸ್ಟಾಗ್ರಾಮ್ ಇನ್​ಫ್ಲ್ಯುಯೆನ್ಸರ್ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಬೈ ನಿವಾಸಿ ಅನ್ವಿ ಕಾಮ್ದಾರ್ ರೀಲ್ ಮಾಡುತ್ತಾ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನ್ವಿ ಜುಲೈ 16 ರಂದು ಏಳು ಸ್ನೇಹಿತರೊಂದಿಗೆ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು.  ಬೆಳಿಗ್ಗೆ 10.30ಕ್ಕೆ ವಿಡಿಯೊ ಮಾಡುವಾಗ ಅನ್ವಿ ಆಳವಾದ ಕಮರಿಗೆ ಬಿದ್ದಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ತುರ್ತು ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದರು ಮತ್ತು ರಕ್ಷಣಾ ತಂಡವು ಘಟನಾ ಸ್ಥಳಕ್ಕೆ ನೀಡಿ ಯುವತಿಯ ಪತ್ತೆಗಾಗಿ ಶ್ರಮವಹಿಸುತ್ತಿದೆ. ನಾವು ಸ್ಥಳಕ್ಕೆ ತಲುಪಿದ ಕೂಡಲೇ, ಯುವತಿ ಸುಮಾರು 300ರಿಂದ 350 ಅಡಿ ಕೆಳಗೆ ಬಿದ್ದಿದ್ದಾಳೆ ಎಂಬದು ಗೊತ್ತಾಯಿತು. ಅವರು ಗಂಭೀರ ಗಾಯಗೊಂಡಿದ್ದರಿಂದ ಮತ್ತು ಭಾರಿ ಮಳೆಯಾಗುತ್ತಿದ್ದ ಕಾರಣ ಅವಳನ್ನು ಮೇಲಕ್ಕೆತ್ತುವುದು ಕಷ್ಟಕರವಾಗಿತ್ತು. ಬಳಿಕ ಸರಪಳಿಯ ಮೂಲಕ ಅವರನ್ನು ಹೊರತೆಗೆದೆವು ಎಂದು ಅಧಿಕಾರಿಗಳು ಹೊರಟ್ಟಿದ್ದಾರೆ.

ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ, ಅನ್ವಿಯನ್ನು ಕಮರಿಯಿಂದ ಹೊರತೆಗೆಯಲಾಯಿತು. ತೀವ್ರ ಗಾಯಗಳಿಂದಾಗಿ ಮನಗಾಂವ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ತಹಶೀಲ್ದಾರ್ ಮತ್ತು ಮನಗಾಂವ್ ಪೊಲೀಸ್ ಇನ್​ಸ್ಪೆಕ್ಟರ್​ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಪ್ರವಾಸೋದ್ಯಮವನ್ನು ಜವಾಬ್ದಾರಿಯುತವಾಗಿ ಆನಂದಿಸಬೇಕು ಮತ್ತು ಸಹ್ಯಾದ್ರಿ ಶ್ರೇಣಿಗಳ ರಮಣೀಯ ಸೌಂದರ್ಯವನ್ನು ಅನ್ವೇಷಿಸುವಾಗ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

20 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

20 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

20 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

21 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

22 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

22 hours ago