Featured

ರುಚಿಯಾದ ಬೀಟ್ ರೂಟ್ ಹಲ್ವಾ ಮಾಡುವ ವಿಧಾನ – Vishwanews24

ಮನೆಯಲ್ಲಿ ಹಲ್ವಾ ಮಾಡುವಾಗ ತಕ್ಷಣ ನೆನಪಿಗೆ ಬರುವುದು ಕ್ಯಾರೆಟ್ ಹಲ್ವಾ, ಕುಂಬಳಕಾಯಿ ಹಲ್ವಾ, ಆದರೆ ಬೀಟ್ ರೂಟ್ ನಿಂದಲೂ ಸವಿರುಚಿಯ ಹಲ್ವಾ ತಯಾರಿಸಬಹುದು ಗೊತ್ತಾ? ಈ ಬೀಟ್ ರೂಟ್ ಹಲ್ವಾವನ್ನು ಹೆಚ್ಚಿನ ಪರಿಶ್ರಮವಿಲ್ಲದೆ ತಯಾರಿಸಬಹುದು. ಮಕ್ಕಳಿಗಂತೂ ಇದರ ಬಣ್ಣ ಮತ್ತು ರುಚಿ ತುಂಬಾ ಇಷ್ಟವಾಗುವುದು.

ಬೇಕಾಗುವ ಸಾಮಾಗ್ರಿಗಳು :

  • 2 ಬಟ್ಟಲು ಹಾಲು
  • 4 ಬೀಟ್ ರೂಟ್
  • ಅರ್ಧ ಬಟ್ಟಲು ಸಕ್ಕರೆ
  • ಏಲಕ್ಕಿ ಪುಡಿ
  • ತುಪ್ಪ
  • ಗೋಡಂಬಿ
  • ಬಾದಾಮಿ
  • ಕೋವಾ
  • ಹಾಲು
  • ಒಣ ದ್ರಾಕ್ಷಿ

ಮಾಡುವ ವಿಧಾನ…

  • ಮಾಡುವ ವಿಧಾನ: * ಬೀಟ್ ರೂಟ್ ನ ಸಿಪ್ಪೆ ಸುಲಿದು ಅದನ್ನು ತುರಿಯಿರಿ.
  • ಬಾದಾಮಿಯನ್ನು ಬಿಸಿ ನೀರಿನಲ್ಲಿ 10 ನಿಮಿಷ ಹಾಕಿ ಅದರ ಸಿಪ್ಪೆ ಸುಲಿಯಿರಿ, ನಂತರ ಚಿಕ್ಕ-ಚಿಕ್ಕ ಪೀಸ್ ಮಾಡಿ.
  • ಪ್ಯಾನ್ ಗೆ 1 ಚಮಚ ತುಪ್ಪ ಹಾಕಿ ಬಿಸಿ ಮಾಡಿ ಅದರಲ್ಲಿ ಗೋಡಂಬಿ ಹಾಕಿ 2-3 ನಿಮಿಷ ಫ್ರೈ ಮಾಡಿ ಬದಿಯಲ್ಲಿ ತೆಗೆದಿಡಿ.
  • ನಂತರ ಗೋಡಂಬಿ ಫ್ರೈ ಮಾಡಿದ ಪ್ಯಾನ್ ಗೆ 2 ಚಮಚ ತುಪ್ಪ ಹಾಕಿ ಬಿಸಿ ಮಾಡಿ ಮಾಡಿ, ನಂತರ ಹಸಿ ವಾಸನೆ ಹೋಗುವವರೆಗೆ ಫ್ರೈ ಮಾಡಿ. * ನಂತರ ಎರಡು ಕಪ್ ಹಾಲು ಮತ್ತು ಸಕ್ಕರೆ ಹಾಕಿ ಕಡಿಮೆ ಉರಿಯಲ್ಲಿ ಬೀಟ್ ರೂಟ್ ಬೆಂದು ಮೆತ್ತಗಾಗಿ, ಹಾಲು ಬತ್ತುವವರೆಗೆ ಬೇಯಿಸಿ, ಆಗಾಗ ಸೌಟ್ ನಿಂದ ತಿರುಗಿಸುತ್ತಾ ಬೇಯಿಸಬೇಕು, ಇಲ್ಲದಿದ್ದರೆ ಅಡಿ ಹಿಡಿಯುವುದು.
  • ಈಗ ಏಲಕ್ಕಿ ಪುಡಿ ಹಾಕಿ ಉಳಿದ ತುಪ್ಪವನ್ನು ಸುರಿದು ಕಡಿಮೆ ಉರಿಯಲ್ಲಿ 5 ನಿಮಿಷ ಬೇಯಿಸಿ, ಉರಿಯಿಂದ ಇಳಿಸಿ, ಗೋಡಂಬಿ ಬಾದಾಮಿಯಿಂದ ಅಲಂಕರಿಸಿ ತಣ್ಣಗಾಗಲು ಇಡಿ.
  • ಬೇಕಾದರೆ khoaವನ್ನು ಮೇಲೆ ಹಾಕಬಹುದು. ಇಷ್ಟು ಮಾಡಿದರೆ ಸವಿರುಚಿಯ ಬೀಟ್ ರೂಟ್ ಹಲ್ವಾ ರೆಡಿ.

    khoa ಮಾಡುವುದು ಹೇಗೆ? ಇದು ರೆಡಿ ಮೇಡ್ ಸಿಗುತ್ತದೆ, ಮಾಡುವುದಾದರೆ ದೊಡ್ಡ ಪಾತ್ರೆಗೆ 1 ಕಪ್ ಹಾಲು ಹಾಕಿ, ಹಾಲು ಗಟ್ಟಿಯಾಗುವವರೆಗೆ ಕಡಿಮೆ ಉರಿಯಲ್ಲಿ ಕುದಿಸಬೇಕು. (ಇದನ್ನು ಹಲ್ವಾದ ಮೇಲೆ ಹಾಕಿದರೆ ಹಲ್ವಾದ ರುಚಿ ಹೆಚ್ಚುವುದು).

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago