Featured

ರುಚಿಯಾದ ಬೀಟ್ ರೂಟ್ ಹಲ್ವಾ ಮಾಡುವ ವಿಧಾನ – Vishwanews24

ಮನೆಯಲ್ಲಿ ಹಲ್ವಾ ಮಾಡುವಾಗ ತಕ್ಷಣ ನೆನಪಿಗೆ ಬರುವುದು ಕ್ಯಾರೆಟ್ ಹಲ್ವಾ, ಕುಂಬಳಕಾಯಿ ಹಲ್ವಾ, ಆದರೆ ಬೀಟ್ ರೂಟ್ ನಿಂದಲೂ ಸವಿರುಚಿಯ ಹಲ್ವಾ ತಯಾರಿಸಬಹುದು ಗೊತ್ತಾ? ಈ ಬೀಟ್ ರೂಟ್ ಹಲ್ವಾವನ್ನು ಹೆಚ್ಚಿನ ಪರಿಶ್ರಮವಿಲ್ಲದೆ ತಯಾರಿಸಬಹುದು. ಮಕ್ಕಳಿಗಂತೂ ಇದರ ಬಣ್ಣ ಮತ್ತು ರುಚಿ ತುಂಬಾ ಇಷ್ಟವಾಗುವುದು.

ಬೇಕಾಗುವ ಸಾಮಾಗ್ರಿಗಳು :

  • 2 ಬಟ್ಟಲು ಹಾಲು
  • 4 ಬೀಟ್ ರೂಟ್
  • ಅರ್ಧ ಬಟ್ಟಲು ಸಕ್ಕರೆ
  • ಏಲಕ್ಕಿ ಪುಡಿ
  • ತುಪ್ಪ
  • ಗೋಡಂಬಿ
  • ಬಾದಾಮಿ
  • ಕೋವಾ
  • ಹಾಲು
  • ಒಣ ದ್ರಾಕ್ಷಿ

ಮಾಡುವ ವಿಧಾನ…

  • ಮಾಡುವ ವಿಧಾನ: * ಬೀಟ್ ರೂಟ್ ನ ಸಿಪ್ಪೆ ಸುಲಿದು ಅದನ್ನು ತುರಿಯಿರಿ.
  • ಬಾದಾಮಿಯನ್ನು ಬಿಸಿ ನೀರಿನಲ್ಲಿ 10 ನಿಮಿಷ ಹಾಕಿ ಅದರ ಸಿಪ್ಪೆ ಸುಲಿಯಿರಿ, ನಂತರ ಚಿಕ್ಕ-ಚಿಕ್ಕ ಪೀಸ್ ಮಾಡಿ.
  • ಪ್ಯಾನ್ ಗೆ 1 ಚಮಚ ತುಪ್ಪ ಹಾಕಿ ಬಿಸಿ ಮಾಡಿ ಅದರಲ್ಲಿ ಗೋಡಂಬಿ ಹಾಕಿ 2-3 ನಿಮಿಷ ಫ್ರೈ ಮಾಡಿ ಬದಿಯಲ್ಲಿ ತೆಗೆದಿಡಿ.
  • ನಂತರ ಗೋಡಂಬಿ ಫ್ರೈ ಮಾಡಿದ ಪ್ಯಾನ್ ಗೆ 2 ಚಮಚ ತುಪ್ಪ ಹಾಕಿ ಬಿಸಿ ಮಾಡಿ ಮಾಡಿ, ನಂತರ ಹಸಿ ವಾಸನೆ ಹೋಗುವವರೆಗೆ ಫ್ರೈ ಮಾಡಿ. * ನಂತರ ಎರಡು ಕಪ್ ಹಾಲು ಮತ್ತು ಸಕ್ಕರೆ ಹಾಕಿ ಕಡಿಮೆ ಉರಿಯಲ್ಲಿ ಬೀಟ್ ರೂಟ್ ಬೆಂದು ಮೆತ್ತಗಾಗಿ, ಹಾಲು ಬತ್ತುವವರೆಗೆ ಬೇಯಿಸಿ, ಆಗಾಗ ಸೌಟ್ ನಿಂದ ತಿರುಗಿಸುತ್ತಾ ಬೇಯಿಸಬೇಕು, ಇಲ್ಲದಿದ್ದರೆ ಅಡಿ ಹಿಡಿಯುವುದು.
  • ಈಗ ಏಲಕ್ಕಿ ಪುಡಿ ಹಾಕಿ ಉಳಿದ ತುಪ್ಪವನ್ನು ಸುರಿದು ಕಡಿಮೆ ಉರಿಯಲ್ಲಿ 5 ನಿಮಿಷ ಬೇಯಿಸಿ, ಉರಿಯಿಂದ ಇಳಿಸಿ, ಗೋಡಂಬಿ ಬಾದಾಮಿಯಿಂದ ಅಲಂಕರಿಸಿ ತಣ್ಣಗಾಗಲು ಇಡಿ.
  • ಬೇಕಾದರೆ khoaವನ್ನು ಮೇಲೆ ಹಾಕಬಹುದು. ಇಷ್ಟು ಮಾಡಿದರೆ ಸವಿರುಚಿಯ ಬೀಟ್ ರೂಟ್ ಹಲ್ವಾ ರೆಡಿ.

    khoa ಮಾಡುವುದು ಹೇಗೆ? ಇದು ರೆಡಿ ಮೇಡ್ ಸಿಗುತ್ತದೆ, ಮಾಡುವುದಾದರೆ ದೊಡ್ಡ ಪಾತ್ರೆಗೆ 1 ಕಪ್ ಹಾಲು ಹಾಕಿ, ಹಾಲು ಗಟ್ಟಿಯಾಗುವವರೆಗೆ ಕಡಿಮೆ ಉರಿಯಲ್ಲಿ ಕುದಿಸಬೇಕು. (ಇದನ್ನು ಹಲ್ವಾದ ಮೇಲೆ ಹಾಕಿದರೆ ಹಲ್ವಾದ ರುಚಿ ಹೆಚ್ಚುವುದು).

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

16 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

18 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago