ಬೆಂಗಳೂರು: “ನಾಲ್ಕು ದೇಶಗಳಲ್ಲಿ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿದೆ. ತೀವ್ರತೆ ಬಗ್ಗೆ ವಿಶ್ವಸಂಸ್ಥೆಯಿಂದ ಅಧ್ಯಯನ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ” ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
“ರೂಪಾಂತರಿ ಕೊರೊನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೇ ಮಾಹಿತಿ ನೀಡಿದೆ ಎಂದಿದ್ದಾರೆ. ಈ ಬಗ್ಗೆ ಯಾರೂ ಭಯಡುವ ಅಗತ್ಯ ಇಲ್ಲ. ಎಚ್ಚರಿಕೆಯ ಅಗತ್ಯವಿದೆ” ಎಂದಿದ್ದಾರೆ.
“ವಿದೇಶದಿಂದ ಬರುವವರಿಗೆ ಕೊರೊಸಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಮಾರ್ಗಸೂಚಿಯೂ ಪ್ರಕಟಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ಬಂದರೂ ಸಹ ಒಂದು ವಾರ ಹೋಂ ಕ್ವಾರಂಟೈನ್ನಲ್ಲಿರಬೇಕಿದೆ. ವಾರದ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು” ಎಂದು ಹೇಳಿದ್ದಾರೆ.
“45 ಲಕ್ಷ ಮಂದಿ ಎರಡನೇ ಡೋಸ್ ಪಡೆಕೊಂಡಿಲ್ಲ. ದಯಮಾಡಿ ಎರಡನೇ ಡೋಸ್ ಹಾಕಿಸಿಕೊಳ್ಳಿ. ಸುಮ್ಮನೆ ಆತಂಕ ಸೃಷ್ಟಿ ಮಾಡುವುದು ಬೇಡ. ಅವಧಿ ಮುಗಿದರೂ ಸಹ ಕೆಲವರು ಲಸಿಕೆ ಪಡೆದಿಲ್ಲ. ಉದಾಸೀನ ತೋರದೇ ಲಸಿಕೆ ಪಡೆದುಕೊಳ್ಳಲಿ” ಎಂದು ಮನವಿ ಮಾಡಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…