ಬೆಂಗಳೂರು: “ನಾಲ್ಕು ದೇಶಗಳಲ್ಲಿ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿದೆ. ತೀವ್ರತೆ ಬಗ್ಗೆ ವಿಶ್ವಸಂಸ್ಥೆಯಿಂದ ಅಧ್ಯಯನ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ” ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
“ರೂಪಾಂತರಿ ಕೊರೊನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೇ ಮಾಹಿತಿ ನೀಡಿದೆ ಎಂದಿದ್ದಾರೆ. ಈ ಬಗ್ಗೆ ಯಾರೂ ಭಯಡುವ ಅಗತ್ಯ ಇಲ್ಲ. ಎಚ್ಚರಿಕೆಯ ಅಗತ್ಯವಿದೆ” ಎಂದಿದ್ದಾರೆ.
“ವಿದೇಶದಿಂದ ಬರುವವರಿಗೆ ಕೊರೊಸಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಮಾರ್ಗಸೂಚಿಯೂ ಪ್ರಕಟಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ಬಂದರೂ ಸಹ ಒಂದು ವಾರ ಹೋಂ ಕ್ವಾರಂಟೈನ್ನಲ್ಲಿರಬೇಕಿದೆ. ವಾರದ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು” ಎಂದು ಹೇಳಿದ್ದಾರೆ.
“45 ಲಕ್ಷ ಮಂದಿ ಎರಡನೇ ಡೋಸ್ ಪಡೆಕೊಂಡಿಲ್ಲ. ದಯಮಾಡಿ ಎರಡನೇ ಡೋಸ್ ಹಾಕಿಸಿಕೊಳ್ಳಿ. ಸುಮ್ಮನೆ ಆತಂಕ ಸೃಷ್ಟಿ ಮಾಡುವುದು ಬೇಡ. ಅವಧಿ ಮುಗಿದರೂ ಸಹ ಕೆಲವರು ಲಸಿಕೆ ಪಡೆದಿಲ್ಲ. ಉದಾಸೀನ ತೋರದೇ ಲಸಿಕೆ ಪಡೆದುಕೊಳ್ಳಲಿ” ಎಂದು ಮನವಿ ಮಾಡಿದ್ದಾರೆ.
ಉಡುಪಿ : ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24)…
ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ ಉಡುಪಿ : ನೇಪಾಳ ಮತ್ತು…
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…