ಬೆಂಗಳೂರು: “ನಾಲ್ಕು ದೇಶಗಳಲ್ಲಿ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿದೆ. ತೀವ್ರತೆ ಬಗ್ಗೆ ವಿಶ್ವಸಂಸ್ಥೆಯಿಂದ ಅಧ್ಯಯನ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ” ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
“ರೂಪಾಂತರಿ ಕೊರೊನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೇ ಮಾಹಿತಿ ನೀಡಿದೆ ಎಂದಿದ್ದಾರೆ. ಈ ಬಗ್ಗೆ ಯಾರೂ ಭಯಡುವ ಅಗತ್ಯ ಇಲ್ಲ. ಎಚ್ಚರಿಕೆಯ ಅಗತ್ಯವಿದೆ” ಎಂದಿದ್ದಾರೆ.
“ವಿದೇಶದಿಂದ ಬರುವವರಿಗೆ ಕೊರೊಸಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಮಾರ್ಗಸೂಚಿಯೂ ಪ್ರಕಟಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ಬಂದರೂ ಸಹ ಒಂದು ವಾರ ಹೋಂ ಕ್ವಾರಂಟೈನ್ನಲ್ಲಿರಬೇಕಿದೆ. ವಾರದ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು” ಎಂದು ಹೇಳಿದ್ದಾರೆ.
“45 ಲಕ್ಷ ಮಂದಿ ಎರಡನೇ ಡೋಸ್ ಪಡೆಕೊಂಡಿಲ್ಲ. ದಯಮಾಡಿ ಎರಡನೇ ಡೋಸ್ ಹಾಕಿಸಿಕೊಳ್ಳಿ. ಸುಮ್ಮನೆ ಆತಂಕ ಸೃಷ್ಟಿ ಮಾಡುವುದು ಬೇಡ. ಅವಧಿ ಮುಗಿದರೂ ಸಹ ಕೆಲವರು ಲಸಿಕೆ ಪಡೆದಿಲ್ಲ. ಉದಾಸೀನ ತೋರದೇ ಲಸಿಕೆ ಪಡೆದುಕೊಳ್ಳಲಿ” ಎಂದು ಮನವಿ ಮಾಡಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…