ಬೆಂಗಳೂರು: “ನಾಲ್ಕು ದೇಶಗಳಲ್ಲಿ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿದೆ. ತೀವ್ರತೆ ಬಗ್ಗೆ ವಿಶ್ವಸಂಸ್ಥೆಯಿಂದ ಅಧ್ಯಯನ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ” ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
“ರೂಪಾಂತರಿ ಕೊರೊನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೇ ಮಾಹಿತಿ ನೀಡಿದೆ ಎಂದಿದ್ದಾರೆ. ಈ ಬಗ್ಗೆ ಯಾರೂ ಭಯಡುವ ಅಗತ್ಯ ಇಲ್ಲ. ಎಚ್ಚರಿಕೆಯ ಅಗತ್ಯವಿದೆ” ಎಂದಿದ್ದಾರೆ.
“ವಿದೇಶದಿಂದ ಬರುವವರಿಗೆ ಕೊರೊಸಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಮಾರ್ಗಸೂಚಿಯೂ ಪ್ರಕಟಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ಬಂದರೂ ಸಹ ಒಂದು ವಾರ ಹೋಂ ಕ್ವಾರಂಟೈನ್ನಲ್ಲಿರಬೇಕಿದೆ. ವಾರದ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು” ಎಂದು ಹೇಳಿದ್ದಾರೆ.
“45 ಲಕ್ಷ ಮಂದಿ ಎರಡನೇ ಡೋಸ್ ಪಡೆಕೊಂಡಿಲ್ಲ. ದಯಮಾಡಿ ಎರಡನೇ ಡೋಸ್ ಹಾಕಿಸಿಕೊಳ್ಳಿ. ಸುಮ್ಮನೆ ಆತಂಕ ಸೃಷ್ಟಿ ಮಾಡುವುದು ಬೇಡ. ಅವಧಿ ಮುಗಿದರೂ ಸಹ ಕೆಲವರು ಲಸಿಕೆ ಪಡೆದಿಲ್ಲ. ಉದಾಸೀನ ತೋರದೇ ಲಸಿಕೆ ಪಡೆದುಕೊಳ್ಳಲಿ” ಎಂದು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…