Featured

ರೂರಲ್‌ ಎಜುಕೇಶನ್‌ ಸೊಸೈಟಿ ಪಟ್ಲ ಅಧ್ಯಕ್ಷರಾಗಿ ಪೆರ್ಣಂಕಿಲ ಶ್ರೀಶ ನಾಯಕ್ – vishwanews24

ರೂರಲ್‌ ಎಜುಕೇಶನ್‌ ಸೊಸೈಟಿ (ರಿ) ಪಟ್ಲ ಅಧ್ಯಕ್ಷರಾಗಿ ಪೆರ್ಣಂಕಿಲ ಶ್ರೀಶ ನಾಯಕ್

ರೂರಲ್‌ ಎಜುಕೇಶನ್‌ ಸೊಸೈಟಿ, ಪಟ್ಲ ಇದರ ವಾರ್ಷಿಕ ಮಹಾ ಸಭೆಯು ಅಧ್ಯಕ್ಷರಾದ ಶ್ರೀಯುತ ಡಾ. ನಾರಾಯಣ ಶೆಣೈ ಕೆ. ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಗತಸಭೆಗಳ ವರದಿಗಳನ್ನು ಮತ್ತು ಆಯ-ವ್ಯಯ ತಖ್ತೆಗಳನ್ನು ಓದಿ ಅನುಮೋದಿಸಿದ ಬಳಿಕ 2026-28ನೇ ಸಾಲಿಗೆ ೯ ಜನರನ್ನು ಒಳಗೊಂಡ ನೂತನ ಆಡಳಿತ ಮಂಡಳಿಯನ್ನು ಆರಿಸಲಾಯಿತು.

ರೂರಲ್‌ ಎಜುಕೇಶನ್‌ ಸೊಸೈಟಿ, ಪಟ್ಲ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀ ಪೆರ್ಣಂಕಿಲ ಶ್ರೀಶ ನಾಯಕ್‌ ಇವರು ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಡಾ. ಗೋಪಿನಾಥ ನಾಯಕ್‌, ದರ್ಮೆಟ್ಟು ಪಳ್ಳಿ, ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀ ಜಯರಾಜ್‌ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ಶ್ರೀಮತಿ ಅರ್ಚನಾ ನಾಯಕ್‌, ಕೋಶಾಧಿಕಾರಿಗಳಾಗಿ ಡಾ. ನಾರಾಯಣ ಶೆಣೈ ಕೆ. ಸದಸ್ಯರುಗಳಾಗಿ ಡಾ.ನಿರಂಜನ ಪ್ರಭು, ಶ್ರೀಮತಿ ಮಲ್ಲಿಕಾ ಶೆಟ್ಟಿ, ನಿತ್ಯಾನಂದ ನಾಯಕ್‌ ನರಸಿಂಗೆ, ಉಮೇಶ್‌ ನಾಯಕ್‌ ಪೆರ್ಣಂಕಿಲ ಆಯ್ಕೆಯಾದರು. ವಿಶೇ಼ಷ ಸಲಹೆಗಾರರಾಗಿ ಶ್ರೀ ಗುಜ್ಜಾಡಿ ಪ್ರಭಾಕರ ನಾಯಕ್‌ ( ಖ್ಯಾತ ಲೆಕ್ಕಪರಿಷೋಧಕರು ) ಆಯ್ಕೆಯಾಗಿರುತ್ತಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪ್ರಾರಂಭಿಸಲ್ಪಟ್ಟ ಶಿಕ್ಷಣ ಸಂಸ್ಥೆ ಸಾಕಷ್ಟು ಮಜಲುಗಳನ್ನು ದಾಟಿಕೊಂಡು ಈ ಬಾರಿ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ. ಅಧಿಕಾರ ಹಸ್ತಾಂತರದ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಶ್ರೀಶ ನಾಯಕ್‌ ಮಾತನಾಡುತ್ತಾ ಈ ಸಂಸ್ಥೆಯಡಿ ಕಾರ್ಯಾಚರಿಸುತ್ತಿರುವ ಯು. ಎಸ್.‌ ನಾಯಕ್‌ ಪ್ರೌಢಶಾಲೆ, ಪಟ್ಲ, ಲೋಕಮಾನ್ಯ ತಿಲಕ್‌ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಟ್ಲ, ವಿಶ್ವಂಭರ ಶಿಶು ಮಂದಿರ ಪಟ್ಲ ಇವುಗಳ ವ್ಯವಸ್ಥಾಪನೆ ಮತ್ತು ಅಭಿವೃದ್ಧಿಯಲ್ಲಿ ಸರ್ವ ಶಿಕ್ಷಣಾಭಿಮಾನಿಗಳ ಮತ್ತು ಹಳೆ ವಿದ್ಯಾರ್ಥಿಗಳ ಸಹಕಾರವನ್ನು ಯಾಚಿಸಿದರು. ಕಾರ್ಯದರ್ಶಿ ಜಯರಾಜ ಶೆಟ್ಟಿಯವರು ವಂದನಾರ್ಪಣೆಗೈದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

23 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

24 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago