ಕಾಠ್ಮಂಡು: ರೆಸಾರ್ಟ್ ವೊಂದರ ಕೋಣೆಯೊಳಗೆ ಗ್ಯಾಸ್ ಲೀಕ್ ಆಗಿ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಭಾರತೀಯ ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ಸಂಭವಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ರೆಸಾರ್ಟ್ ಕೋಣೆಯಲ್ಲಿ ಪ್ರಜ್ಞಾ ಹೀನರಾಗಿ ಬಿದ್ದಿದ್ದ ಎಂಟು ಮಂದಿಯನ್ನು ಏರ್ ಲಿಫ್ಟ್ ಮೂಲಕ ಎಚ್ ಎಎಮ್ ಎಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರೆಲ್ಲಾ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಸಿಂಗ್ ತಿಳಿಸಿದ್ದಾರೆ.
ಸಾವನ್ನಪ್ಪಿದ ಪ್ರವಾಸಿಗರನ್ನು ಪ್ರವೀಣ್ ಕುಮಾರ್ ನಾಯರ್ (39ವರ್ಷ), ಶರಣ್ಯಾ (34), ರಂಜಿತ್ ಕುಮಾರ್ ಟಿಬಿ (39), ಇಂದು ರಂಜಿತ್ (34), ಶ್ರೀ ಭದ್ರಾ (9ವರ್ಷ), ಅಭಿನವ್ ಸೂರ್ಯ(9), ಅಭಿ ನಾಯರ್ (7) ಮತ್ತು ವೈಷ್ಣವ್ ರಂಜಿತ್ (2) ಎಂದು ಗುರುತಿಸಲಾಗಿದೆ ಎಂದು ಕಾಠ್ಮಂಡು ಪೋಸ್ಟ್ ವರದಿ ಮಾಡಿದೆ.
15 ಜನರ ತಂಡ ಕೇರಳದಿಂದ ಪೋಖ್ರಾಗೆ ಪ್ರವಾಸ ತೆರಳಿತ್ತು. ನೇಪಾಳದಲ್ಲಿ ಪ್ರವಾಸ ಕೈಗೊಂಡ ನಂತರ ಊರಿಗೆ ವಾಪಸ್ ಆಗುವ ಮುನ್ನ ಸೋಮವಾರ ರಾತ್ರಿ ಮಕ್ವಾನ್ ಪುರ್ ಜಿಲ್ಲೆಯ ದಮನ್ ನಲ್ಲಿರುವ ಎವರೆಸ್ಟ್ ಪನೋರಮಾ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದರು ಎಂದು ಹಿಮಾಲಯನ್ ಟೈಮ್ಸ್ ವರದಿ ಮಾಡಿದೆ.
ರೆಸಾರ್ಟ್ ಮ್ಯಾನೇಜರ್ ಹೇಳಿಕೆ ಪ್ರಕಾರ, ಅಥಿತಿಗಳು ರೂಂನಲ್ಲಿದ್ದು, ವಿಪರೀತ ಚಳಿಯ ಹಿನ್ನೆಲೆಯಲ್ಲಿ ಬೆಚ್ಚಗಾಗಿಡಲು ಗ್ಯಾಸ್ ಹೀಟರ್ ಅನ್ನು ಆನ್ ಮಾಡಿ ಇಟ್ಟಿರುವುದಾಗಿ ತಿಳಿಸಿದ್ದಾರೆ. ಇವರೆಲ್ಲಾ ಒಟ್ಟು ನಾಲ್ಕು ರೂಂಗಳನ್ನು ಬುಕ್ ಮಾಡಿದ್ದರು. ಎಂಟು ಮಂದಿ ಒಂದು ಕೋಣೆಯಲ್ಲಿ ವಾಸ್ತವ್ಯ ಹೂಡಿದ್ದರು. ಉಳಿದವರು ಬೇರೆ ರೂಂಗಳಲ್ಲಿ ಮಲಗಿದ್ದರು ಎಂದು ವಿವರಿಸಿದ್ದಾರೆ.
ಎಲ್ಲರೂ ಕೋಣೆಯ ಕಿಟಕಿ, ಬಾಗಿಲುಗಳಿಗೆ ಒಳಗಿನಿಂದ ಬೋಲ್ಟ್ ಹಾಕಿಕೊಂಡಿದ್ದರು. ಬಿಸಿ ಗಾಳಿಗೆ ಉಸಿರುಗಟ್ಟಿ ಎಂಟು ಮಂದಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿರುವುದಾಗಿ ವರದಿ ತಿಳಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…