ಬೆಂಗಳೂರು: ಮಾಜಿ ಬಿಬಿಎಂಪಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಹಲವು ಹಿನ್ನೆಲೆಗಳಿದ್ದು ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಹತ್ಯೆಗೆ ಹಲವಾರು ಹಿನ್ನೆಲೆಗಳಿವೆ. ಈ ಹಿಂದೆ ಅವರ ಪತಿಯ ಹತ್ಯೆ ಆಗಿತ್ತು, ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಸಾಕಷ್ಟು ವಿಷಯಗಳು ಹೊರ ಬರುತ್ತಿವೆ. ಆರೋಪಿಗಳನ್ನು ಬಂಧನವೂ ನಡೆಯುತ್ತಿದ್ದು ಶೀಘ್ರದಲ್ಲೇ ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.
ಹಾಡಹಗಲೆ ಕೊಲೆ ನಡೆದಿದ್ದರಿಂದ ಪೊಲೀಸರು ತನಿಖೆ ಮಾಡುವಾಗ ಹಲವು ವಿಚಾರ ಗೊತ್ತಾಗಿದೆ. ರಾಜಕೀಯ ಕಾರಣವೋ ಕೌಟುಂಬಿಕ ಕಾರಣವೋ ಎಂಬುದು ತನಿಖೆಯಲ್ಲಿ ಸ್ಪಷ್ಟವಾಗುತ್ತದೆ, ಶೀಘ್ರದಲ್ಲೇ ಗೊತ್ತಾಗಲಿದೆ ಎಂದರು.
ಗುರುವಾರ ಬೆಳಗ್ಗೆ ರೇಖಾ ಕದಿರೇಶ್ ಅವರ ಹತ್ಯೆ ನಡೆದಿತ್ತು. ಮೂವರ ತಂಡ ಈ ಕೃತ್ಯ ಎಸಗಿತ್ತು. ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದು ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನುಳಿದ ಇಬ್ಬರು ಪ್ರಮುಖ ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
2018 ರಲ್ಲಿ ರೇಖಾ ಕದಿರೇಶ್ ಅವರ ಪತಿ ಕದಿರೇಶ್ ಅವರನ್ನು ಹತ್ಯೆ ಮಾಡಲಾಗಿತ್ತು. ಅದೇ ಆರೋಪಿಗಳು ಇದೀಗ ಈ ಕೃತ್ಯವನ್ನು ಭಾಗಿಯಾಗಿರುವ ಸಾಧ್ಯತೆ ಇದೆ. ಹತ್ಯೆಗೆ ವೈಯಕ್ತಿಕ ಕಾರಣ ಅಥವಾ ಹಣಕಾಸು ವ್ಯವಹಾರ ಕಾರಣವೇ ಎಂಬ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅಲ್ಲದೆ ರಾಜಕೀಯ ಕಾರಣ ಇದರ ಹಿಂದೆ ಇದ್ಯಾ ಎಂಬ ಆಯಾಮದಲ್ಲೂ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…