ದಾವಣಗೆರೆ: ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಕೊನೆಗೂ ಫೈನಲ್ ಟಚ್ ಪಡೆದುಕೊಂಡಿದೆ.
ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಒಂದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಘಟನೆ ಕೊನೆಗೂ ಅಂತ್ಯಕಂಡಿದೆ.
ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ.
ಕಳೆದ ನವೆಂಬರ್ ತಿಂಗಳಲ್ಲಿ ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ ನಾಪತ್ತೆಯಾದ್ದರು. ಅದಾದ ಕೆಲ ದಿನಗಳಲ್ಲೇ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರಕ ಘಟನೆಯಂತ ಹೆಚ್ಚಿನ ತನಿಖೆಗೆ ಕೇಳಿ ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ.
ಎಫ್ಎಸ್ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…