ದಾವಣಗೆರೆ: ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಕೊನೆಗೂ ಫೈನಲ್ ಟಚ್ ಪಡೆದುಕೊಂಡಿದೆ.
ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಒಂದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಘಟನೆ ಕೊನೆಗೂ ಅಂತ್ಯಕಂಡಿದೆ.
ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ.
ಕಳೆದ ನವೆಂಬರ್ ತಿಂಗಳಲ್ಲಿ ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ ನಾಪತ್ತೆಯಾದ್ದರು. ಅದಾದ ಕೆಲ ದಿನಗಳಲ್ಲೇ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರಕ ಘಟನೆಯಂತ ಹೆಚ್ಚಿನ ತನಿಖೆಗೆ ಕೇಳಿ ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ.
ಎಫ್ಎಸ್ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…