Featured

ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ : ಸಿದ್ದರಾಮಯ್ಯ ಆಗ್ರಹ  – Vishwanews24

ರೇಣುಕಾಚಾರ್ಯ  ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ : ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಶಾಸಕ ಎಂ.ಪಿ ರೇಣುಕಾಚಾರ್ಯ  ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಆಗ್ರಹಿಸಿದ್ದಾರೆ.

ಟ್ವಿಟರ್ ನಲ್ಲಿ ಸಂತಾಪ ಸೂಚಿಸಿ, ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿದ ಅವರು, ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅನುಮಾನಾಸ್ಪದವಾಗಿ ಕಾಣುತ್ತಿರುವ ಈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ನ.7ರಂದು ಉಡುಪಿಗೆ ಸಿಎಂ ಬೊಮ್ಮಾಯಿ..ಕಾಪುವಿನಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿ – Vishwanews24

ಕಳೆದ ಭಾನುವಾರದಿಂದ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಆ ಬಳಿಕದಿಂದ ಎಲ್ಲಾ ಕಡೆ ಚಂದ್ರುಗಾಗಿ ಹುಡುಕಾಟ ನಡೆಸಲಾಯಿತು. ಐದು ದಿನದ ಹಿಂದೆ ನಾಪತ್ತೆಯಾಗಿದ್ದ ಚಂದ್ರಶೇಖರ್ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ಮಧ್ಯಾಹ್ನದವರೆಗೂ ಚಂದ್ರು ಅವರನ್ನು ಅಪಹರಣ ಮಾಡಿರಬಹುದು ಎಂದು ಶಂಕಿಸಲಾಗಿತ್ತು. ಇದನ್ನೂ ಓದಿ: ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ :-ಆರೋಪಿ ಸಂಶೀರ್ ಬಂಧನ – Vishwanews24

ಆದರೆ ಹೊನ್ನಾಳಿ ಮತ್ತು ನ್ಯಾಮತಿ ಮಾರ್ಗಮಧ್ಯೆ ಬರುವ ಸೊರಟೂರಿನ ತುಂಗಭದ್ರಾ ನದಿಯ ಕಾಲುವೆಯಲ್ಲಿ ಕಾರೊಂದು ಇದೆ ಎಂಬ ಸುದ್ದಿ ಇಡೀ ಪ್ರಕರಣಕ್ಕೆ ಟ್ವಿಸ್ಟ್ ನೀಡಿತು. ಕಾಲುವೆ ಮೇಲ್ಭಾಗದಲ್ಲಿ ಕಾರೊಂದರ ಬಿಡಿಭಾಗಳು ಪತ್ತೆ ಆಗಿದ್ದವು. ನುರಿತ ಈಜುಪಟುಗಳು ಮತ್ತು ಅಗ್ನಿಶಾಮಕ ಪಡೆ ಸಿಬ್ಬಂದಿ ಕಾರ್ಯಾರಚಣೆ ನಡೆಸಿ, ಕಾರನ್ನು ಮೇಲಕ್ಕೆ ಎತ್ತಿದರು. ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago