ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ತನ್ನ ಹಾಗೂ ಮಗ, ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡಬಾರದು ಎಂದು ವಿಜಯಲಕ್ಷ್ಮೀ ಅವರು ತಡೆಯಾಜ್ಞೆ ತಂದಿದ್ದಾರೆ. ಇನ್ನು ರೇಣುಕಾಸ್ವಾಮಿ ಸಾವಿಗೆ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್ಷ್ಮೀ ಅವರು, ರೇಣುಕಾಸ್ವಾಮಿ ಸಾವಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ. ಕಳೆದ ಕೆಲ ದಿನಗಳಿಂದ ದರ್ಶನ್, ನಾನು, ನನ್ನ ಮಗ ಮತ್ತು ದರ್ಶನ್ ಅವರ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳು ದುಃಖದಲ್ಲಿದ್ದೇವೆ. ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಪ್ರಕರಣದಲ್ಲಿ ವಿವಿಧ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದ ಕೆಲ ಸುಳ್ಳು ಮಾಹಿತಿ ಮತ್ತು ಅಸತ್ಯಗಳಿಂದ ಜನರು ವಿಶ್ರಾಂತಿ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನಷ್ಟೇ ಪ್ರಕಟಿಸಲು ನಾನು ಪ್ರತಿಯೊಬ್ಬರನ್ನೂ ಕೋರುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಜಯ ಸಾಧಿಸಲಿ. ಸತ್ಯಮೇವ ಜಯತೇ ಎಂದು ಪೋಸ್ಟ್ ಮಾಡಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…