ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.
ದರ್ಶನ್ ಹೈಕೋರ್ಟ್ಗೆ ಕಾರಣವನ್ನು ಕೊಟ್ಟಿದ್ದಾರೆ. ವೃತ್ತಿಯಲ್ಲಿ ನಾನೊಬ್ಬ ನಟ ಹಾಗೂ ಮೈಸೂರಿನ ಖಾಯಂ ನಿವಾಸಿ. ವೃತ್ತಿಪರ ಕಾರಣಗಳು ಹಾಗೂ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಹೊರಗೆ ಹೋಗುವುದು ಯಾವಾಗಲೂ ಅವಶ್ಯವಿರುತ್ತದೆ. ಆದರೆ, ಈ ಕೋರ್ಟ್ ವಿಚಾರಣಾ ನ್ಯಾಯಲಯದ ವ್ಯಾಪ್ತಿ ಬಿಡದಂತೆ ಷರತ್ತು ವಿಧಿಸಿದೆ. ಇದರಿಂದಾಗಿ ವಿಚಾರಣಾ ನ್ಯಾಯಾಲಯದಲ್ಲಿ ಪ್ರತಿ ಬಾರಿ ಅನುಮತಿ ಪಡೆಯುವುದು ಕಠಿಣವಾಗಿದೆ. ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂದು ನಟ ದರ್ಶನ್ ಕೆಲವು ಅಂಶಗಳನ್ನ ನ್ಯಾಯಾಲಯದ ಮುಂದಿಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…