ಬೆಂಗಳೂರು: ಹಾಸಿಗೆ, ದಿಂಬು ಕೇಳಿದ್ದ ದರ್ಶನ್ಗೆ ಕೋರ್ಟ್ ಡಬಲ್ ಶಾಕ್ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್ನಿಂದ ಮುಖ್ಯ ಸೆಲ್ಗೆ ವರ್ಗಾವಣೆ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಅವಕಾಶ ನೀಡಿದೆ.
ರೇಣುಕಾಸ್ವಾಮಿ ಪ್ರಕರಣದ ಶೀಘ್ರ ವಿಚಾರಣೆ ಕೋರಿದ ಎಸ್ಪಿಪಿ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಅ.31 ರಂದು ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡುವ ಮೂಲಕ ದರ್ಶನ್ಗೆ ಡಬಲ್ ಶಾಕ್ ಕೊಟ್ಟಿದೆ.
ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ 6 ಜನ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಹಾಜರಾಗಿದ್ದರೆ ಉಳಿದ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದರು.
ದರ್ಶನ್ ಅರ್ಜಿಯಲ್ಲಿ ಏನಿತ್ತು?
ನನ್ನನ್ನು ಕ್ವಾರಂಟೈನ್ ಸೆಲ್ನಲ್ಲೇ ಇರಿಸಲಾಗಿದೆ. ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್ಗೆ ಅವಕಾಶ ನೀಡಲಾಗಿದೆ. ಇದರಿಂದ ನನ್ನ ಆರೋಗ್ಯದಲ್ಲಿ ಮತ್ತಷ್ಟು ವ್ಯತ್ಯಾಸವಾಗಿದೆ. ಈ ಹಿಂದೆ ನ್ಯಾಯಾಲಯವು ನೀಡಿದ್ದ ಆದೇಶಕ್ಕೂ ಜೈಲಿನ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ
ಜೈಲಿನಲ್ಲಿ ಕನಿಷ್ಠ ಮೂಲ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಬ್ಯಾರಕ್ನಿಂದ ಹೊರಗೆ ಬರುವುದಕ್ಕೂ ಬಿಡುತ್ತಿಲ್ಲ. ಮೈಮೇಲೆ ಬಿಸಿಲು ಬಿದ್ದು ಹಲವು ದಿನಗಳೇ ಆಗಿವೆ. ಕೈಯಲ್ಲಿ ಫಂಗಸ್ ಕಾಣಿಸಿಕೊಂಡಿದೆ. ನಾನು ಬೆನ್ನು ನೋವಿನಿಂದ ಬಳಲುತ್ತಿದ್ದೇನೆ. ಹೀಗಾಗಿ ತಲೆ ದಿಂಬು, ಬೆಡ್ ಶೀಟ್, ಹಾಸಿಗೆ ನೀಡುವಂತೆ ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…