ಬೆಂಗಳೂರು: ಹಾಸಿಗೆ, ದಿಂಬು ಕೇಳಿದ್ದ ದರ್ಶನ್ಗೆ ಕೋರ್ಟ್ ಡಬಲ್ ಶಾಕ್ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್ನಿಂದ ಮುಖ್ಯ ಸೆಲ್ಗೆ ವರ್ಗಾವಣೆ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಅವಕಾಶ ನೀಡಿದೆ.
ರೇಣುಕಾಸ್ವಾಮಿ ಪ್ರಕರಣದ ಶೀಘ್ರ ವಿಚಾರಣೆ ಕೋರಿದ ಎಸ್ಪಿಪಿ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಅ.31 ರಂದು ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡುವ ಮೂಲಕ ದರ್ಶನ್ಗೆ ಡಬಲ್ ಶಾಕ್ ಕೊಟ್ಟಿದೆ.
ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ 6 ಜನ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಹಾಜರಾಗಿದ್ದರೆ ಉಳಿದ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದರು.
ದರ್ಶನ್ ಅರ್ಜಿಯಲ್ಲಿ ಏನಿತ್ತು?
ನನ್ನನ್ನು ಕ್ವಾರಂಟೈನ್ ಸೆಲ್ನಲ್ಲೇ ಇರಿಸಲಾಗಿದೆ. ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್ಗೆ ಅವಕಾಶ ನೀಡಲಾಗಿದೆ. ಇದರಿಂದ ನನ್ನ ಆರೋಗ್ಯದಲ್ಲಿ ಮತ್ತಷ್ಟು ವ್ಯತ್ಯಾಸವಾಗಿದೆ. ಈ ಹಿಂದೆ ನ್ಯಾಯಾಲಯವು ನೀಡಿದ್ದ ಆದೇಶಕ್ಕೂ ಜೈಲಿನ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ
ಜೈಲಿನಲ್ಲಿ ಕನಿಷ್ಠ ಮೂಲ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಬ್ಯಾರಕ್ನಿಂದ ಹೊರಗೆ ಬರುವುದಕ್ಕೂ ಬಿಡುತ್ತಿಲ್ಲ. ಮೈಮೇಲೆ ಬಿಸಿಲು ಬಿದ್ದು ಹಲವು ದಿನಗಳೇ ಆಗಿವೆ. ಕೈಯಲ್ಲಿ ಫಂಗಸ್ ಕಾಣಿಸಿಕೊಂಡಿದೆ. ನಾನು ಬೆನ್ನು ನೋವಿನಿಂದ ಬಳಲುತ್ತಿದ್ದೇನೆ. ಹೀಗಾಗಿ ತಲೆ ದಿಂಬು, ಬೆಡ್ ಶೀಟ್, ಹಾಸಿಗೆ ನೀಡುವಂತೆ ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…