ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್ಪಿಪಿ ಮತ್ತು ಪ್ರಾಸಿಕ್ಯೂಷನ್ಗೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಪ್ರಕರಣದ ಐವರು ಪ್ರಮುಖ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ನಟ ದರ್ಶನ್ ಅಂಡ್ ಗ್ಯಾಂಗ್ನ ಸದಸ್ಯರಾದ ಪವನ್, ರಾಘವೇಂದ್ರ, ನಂದೀಶ್, ವಿನಯ್ ಹಾಗೂ ಧನರಾಜ್ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಆರೋಪಿಗಳು ಹೊರಬಂದಲ್ಲಿ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ವಾದಿಸಲಾಗಿತ್ತು. ಆದರೆ, ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿ ರಾಚಯ್ಯ ಅವರಿದ್ದ ಏಕಸದಸ್ಯ ಪೀಠವು, ಇಂದು ಪ್ರಾಸಿಕ್ಯೂಷನ್ ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿಗಳ ಜಾಮೀನನ್ನು ಎತ್ತಿ ಹಿಡಿದಿದೆ.
ಆರೋಪಿಗಳಾದ ರಾಘವೇಂದ್ರ, ಧನರಾಜ್ ಹಾಗೂ ವಿನಯ್ ಪರವಾಗಿ ಹಿರಿಯ ವಕೀಲ ರಂಗನಾಥ ರೆಡ್ಡಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ತನಿಖೆ ಈಗಾಗಲೇ ಪೂರ್ಣಗೊಂಡು ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಇಂತಹ ಹಂತದಲ್ಲಿ ಜಾಮೀನು ರದ್ದುಗೊಳಿಸಲು ಬಲವಾದ ಕಾರಣಗಳಿಲ್ಲ ಎಂದು ಪ್ರತಿಪಾದಿಸಿದ್ದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು, ಇಂದು ಅಂತಿಮ ತೀರ್ಪು ಪ್ರಕಟಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಿದ್ದರು. ಈ ಪೈಕಿ ಕೆಲವರಿಗೆ ಜಾಮೀನು ಲಭ್ಯವಾಗಿತ್ತು. ಪ್ರಾಸಿಕ್ಯೂಷನ್ ದರ್ಶನ್ ಸೇರಿದಂತೆ ಒಟ್ಟು 7 ಮಂದಿ ಆರೋಪಿಗಳ ಜಾಮೀನು ರದ್ದತಿಗೆ ಹೈಕೋರ್ಟ್ ಮೊರೆ ಹೋಗಿತ್ತು. ಈಗ ಐವರು ಆರೋಪಿಗಳಿಗೆ ಹೈಕೋರ್ಟ್ನಲ್ಲಿ ಜಯ ಸಿಕ್ಕಂತಾಗಿದ್ದು, ತನಿಖಾ ಸಂಸ್ಥೆಗೆ ಕಾನೂನಾತ್ಮಕವಾಗಿ ಹಿನ್ನಡೆಯಾದಂತಾಗಿದೆ. ಈ ಆದೇಶದಿಂದಾಗಿ ಸದ್ಯ ಜಾಮೀನಿನ ಮೇಲೆ ಹೊರಗಿರುವ ಈ ಐವರು ಆರೋಪಿಗಳು ನಿರಾಳವಾಗಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…