ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನಗಳ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಸಿ ಗೌಡರ್ ಅವರು ಗುರುವಾರ(ಜು.18ರಂದು) ಆದೇಶ ನೀಡಿದ್ದಾರೆ.
ಆ ಮೂಲಕ ದರ್ಶನ್ & ಗ್ಯಾಂಗ್ ಆಗಸ್ಟ್ 1ರವರೆಗೆ ಮತ್ತೆ ಜೈಲಿನಲ್ಲಿ ದಿನ ಕಳೆಯಲಿದ್ದಾರೆ. ದರ್ಶನ್, ಪವಿತ್ರಾ ಗೌ ಡ ಸೇರಿ 17 ಮಂದಿಯನ್ನು ಗುರುವಾರ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇನ್ನು ದರ್ಶನ್ ಅವರಿಗೆ ಜೈಲೂಟ ಸೇವಿಸಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ತಮಗೆ ಮನೆಯೂಟ ಬೇಕು. ಮಲಗಲು ಹಾಸಿಗೆ ಬೇಕು, ಓದಲು ಪುಸ್ತಕಗಳನ್ನು ನೀಡಬೇಕೆಂದು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲು ಅಧಿಕಾರಿಗಳು, ಸರ್ಕಾರಕ್ಕೆ ನೊಟೀಸ್ ನೀಡಿ, ವಿಚಾರಣೆಯನ್ನು ಶುಕ್ರವಾರ (ಜು.19ಕ್ಕೆ) ಅಂದರೆ ನಾಳೆಗೆ ಮುಂದೂಡಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…